ವಿಟಿಯು ವಿಭಜನೆ ಕೈಬಿಡಿ: ಬಸವರಾಜ್ ರಾಯರೆಡ್ಡಿ

ವಿಟಿಯು ವಿಭಜನೆ ಕೈಬಿಡಿ: ಬಸವರಾಜ್ ರಾಯರೆಡ್ಡಿ

ಬೆಳಗಾವಿ: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯ ವಿಭಜನೆ ಮಾಡುತ್ತಿರುವ ಸಮ್ಮಿಶ್ರ ಸರ್ಕಾರದ ಕ್ರಮ ಸರಿಯಲ್ಲ. ಉತ್ತರ ಕರ್ನಾಟಕ ಭಾಗಕ್ಕೆ ಮಾಡುತ್ತಿರುವ ದೊಡ್ಡ ಅನ್ಯಾಯ. ಈ ನಿರ್ಧಾರವನ್ನು ಸರ್ಕಾರ ಹಿಂಪಡೆಯದಿದ್ದರೆ ಪರಿಣಾಮ ನೆಟ್ಟಗಿರಲ್ಲ ಎಂದು ಕಾಂಗ್ರೆಸ್ ಮಾಜಿ ಶಾಸಕ ಬಸವರಾಜ್ ರಾಯರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಯರೆಡ್ಡಿ, ವಿಟಿಯು ವಿಭಜನೆ ಮಾಡಲು ಹೊರಟಿರುವ ಸರ್ಕಾರ ಉತ್ತರ ಕರ್ನಾಟಕ ಭಾಗಕ್ಕೆ ಮಾಡುತ್ತಿರುವ ಅನ್ಯಾಯ. ಹಾಸನಕ್ಕೆ ವಿಭಾಗ ಸ್ಥಳಾಂತರ ಮಾಡುವ ಪ್ರಮುಖ ಉದ್ದೇಶವಿದ್ದು, ಅಲ್ಲಿರುವ ಸಂಪನ್ಮೂಲಗಳ ಮೇಲೆ ಸರ್ಕಾರದ  ಕಣ್ಣು ಬಿದ್ದಿದ್ದು ಹೇಗಾದರು ತಮ್ಮ ಭಾಗಕ್ಕೆ ತೆಗೆದುಕೊಂಡು ಹೋಗುವ ಪ್ರಯತ್ನ ಇದಾಗಿದೆ ಎಂದು ಆರೋಪಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos