ಬೆಂಗಳೂರು, ಮಾ.29, ನ್ಯೂಸ್ ಎಕ್ಸ್ ಪ್ರೆಸ್: ಇಂದು ಬೆಳ್ಳಬೆಳಗ್ಗೆ ಕೆಆರ್ ಮಾರ್ಕೆಟ್ನಲ್ಲಿ ಅನಧಿಕೃತ ಮಳಿಗೆಗಳ ಬೃಹತ್ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಕೆ.ಆರ್. ಮಾರ್ಕೆಟ್ ಕೆಳ ಅಂತಸ್ತಿನಲ್ಲಿ ಅನಧಿಕೃತ ಮಳಿಗೆಗಳನ್ನು ನಿರ್ಮಾಣ ಮಾಡಲಾಗಿತ್ತು ಈ ವಿಷಯಕ್ಕೆ ಸಂಬಂಧಫಟ್ಟಂತೆ ಸ್ಥಳೀಯ ವ್ಯಾಪಾರಸ್ಥರು ಕೋರ್ಟ್ ನಲ್ಲಿ ಪ್ರಕರಣ ದಾಖಲಿಸಿದ್ದರು.
ಪ್ರಕರಣಕ್ಕೆ ಸಂಬಂಧಪಟ್ಟಂತೆ, ಅಕ್ರಮ ಕಟ್ಟಡಗಳನ್ನು ತೆರವು ಮಾಡುವಂತೆ ಹೈಕೋರ್ಟ್ ಆದೇಶ ನೀಡಿದ ಹಿನ್ನಲೆಯಲ್ಲಿ ಬಿಬಿಎಂಪಿ ತೆರವರು ಕಾರ್ಯಾಚರಣೆ ಆರಂಭಿಸಿದ್ದು, ಸ್ಥಳದಲ್ಲಿ 8-10 ಜೆಸಿಬಿಗಳು ಆಗಮಿಸದ್ದು, ಸರಿ ಸುಮಾರು ೨೦ಕ್ಕೂ ಅಧಿಕ ಅಂಗಡಿಗಳನ್ನು ಈಗಾಗಲೇ ಕೆಡವಲಾಗಿದೆ. ಇನ್ನು ಸ್ಥಳದಲ್ಲಿ ಬಿಬಿಎಂಪಿ ಕ್ರಮವನ್ನು ವಿರೋಧಿಸಿ ಸ್ಥಳೀಯ ವ್ಯಾಪಾರಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.