ಬಿಬಿಎಂಪಿ ನಿರ್ಲಕ್ಷ್ಯ: ಮೂರು ಬಲಿ

ಬಿಬಿಎಂಪಿ ನಿರ್ಲಕ್ಷ್ಯ: ಮೂರು ಬಲಿ

ಬೆಂಗಳೂರು, ಜು.1 :  ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಮಾಗಡಿ ರಸ್ತೆಯ (52 ) ನಿವಾಸಿ ಸೇರಿ ಮಹಾಮಾರಿಗೆ ನಗರದಲ್ಲಿ ಮೂರು ಮಂದಿ ಬಲಿಯಾಗಿದ್ದಾರೆ. ಶೀತ, ಕೆಮ್ಮು, ಜ್ವರ ಕಾಣಿಸಿಕೊಂಡಿತ್ತು. ವಿಜಯ ನಗರದ ಖಾಸಗಿ ಕ್ಲಿನಿಕ್‍ನಲ್ಲಿ ಚಿಕಿತ್ಸೆ ಪಡೆಯುವ ಸಂದರ್ಭದಲ್ಲಿ ವೈದ್ಯರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದ್ದರು.

ವರದಿಯಲ್ಲಿ ಪಾಸಿಟಿವ್ ಇರುವುದು ಪತ್ತೆಯಾಗಿದೆ.  ಸೋಂಕು ಇರುವುದು ತಿಳಿಯುತ್ತಿದ್ದಂತೆ ಬಿಬಿಎಂಪಿ ವೈದ್ಯರೇ ನಿಮ್ಮ ಮನೆಗೆ ಬಂದು ಸೋಂಕಿತರನ್ನು ಕರೆದುಕೊಂಡು ಹೋಗುತ್ತಾರೆ ಎಂದು ಮಾಹಿತಿ ನೀಡಲಾಗಿತ್ತು. ಬಿಬಿಎಂಪಿ ಅಧಿಕಾರಿಗಳು ಸೋಂಕಿತರ ಕುಟುಂಬ ವರ್ಗದವರಿಗೆ ಕರೆ ಮಾಡಿ ನಿಮ್ಮ ಮನೆಗೆ ಬರುತ್ತೇವೆ ಎಂದು ಹೇಳಿ ಹೋದವರು ಯಾರೂ ಬರಲಿಲ್ಲ. ಮನೆಯವರೇ ದೂರವಾಣಿ ಕರೆ ಮಾಡಿದರೆ ನಿಮ್ಮ ವಾರ್ಡ್ ನಮಗೆ ಬರುವುದಿಲ್ಲ ಎಂದು ಸಬೂಬು ಹೇಳಿ ಕೈತೊಳೆದುಕೊಂಡರು.ಖಾಸಗಿ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯದಲ್ಲೇ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos