ಬೆಂಗಳೂರು, ಮೇ. 17, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭೆ ಚುನಾವಣೆಯ ಫಲಿತಾಂಶಕ್ಕೂ ಮುನ್ನ ದಿನ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಜೆಡಿಎಸ್ ನಾಯಕರ ಮಹತ್ವದ ಸಭೆ ಕರೆದಿದ್ದಾರೆ. ಮೇ. 21 ರಂದು ಸಭೆ ಕರೆದಿರುವ ಹೆಚ್.ಡಿ. ದೇವೇಗೌಡರು, ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಹಾಗೂ ಮೈತ್ರಿ ಪಕ್ಷಗಳ ನಾಯಕರ ಹೇಳಿಕೆಗಳು ಕುರಿತಂತೆ ಚರ್ಚಿಸಲಿದ್ದಾರೆ ಎನ್ನಲಾಗಿದೆ. ದೇವೇಗೌಡರ ನೇತೃತ್ವದಲ್ಲಿ ಪಕ್ಷದ ಕಚೇರಿಯಲ್ಲಿ ಸಭೆ ನಡೆಯಲಿದ್ದು, ಸಚಿವರು, ಸಂಸದರು, ಶಾಸಕರು ಹಾಗೂ ಮುಖಂಡರು ಭಾಗವಹಿಸಲಿದ್ದಾರೆ.