ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಿಶ್ಚಿತ : ತೇಜಸ್ವಿನಿ

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಿಶ್ಚಿತ : ತೇಜಸ್ವಿನಿ

ಬೆಂಗಳೂರು, ಮೇ. 23, ನ್ಯೂಸ್ಎಕ್ಸ್ ಪ್ರೆಸ್‍: ಮತ ಎಣಿಕೆ ಪ್ರಾರಂಭಕ್ಕೆ ಕೆಲವೇ ಕ್ಷಣಗಳು ಬಾಕಿ ಇವೆ. ಇಂದು ರಾತ್ರಿಯೊಳಗೆ ಫಲಿತಾಂಶ ಹೊರಬೀಳಲಿದೆ. ಮಾಜಿ ಸಚಿವ ಅನಂತ್​ಕುಮಾರ್​ ಅವರ ಪತ್ನಿ, ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಈ ಬಾರಿ ಗೆಲುವು ಸಾಧಿಸುವುದು ನಿಶ್ಚಿತ ಎಂದು ಬಿಜೆಪಿ ನಾಯಕಿ ತೇಜಸ್ವಿನಿ ಅನಂತ್​ ಕುಮಾರ್​ ಅವರು ಟ್ವೀಟ್​ ಮಾಡಿದ್ದಾರೆ.

ತಮ್ಮ ಪತಿ ಅನಂತ್​ ಕುಮಾರ್​ ಅವರನ್ನು ನೆನಪಿಸಿಕೊಂಡ ಅವರು, ಈ ಕ್ಷೇತ್ರದಲ್ಲಿ ಬಿಜೆಪಿ ಗೆಲುವು 1991ರಿಂದ ಪ್ರಾರಂಭವಾಯಿತು. ಅನಂತ್​ಕುಮಾರ್​ ಯಾವುದೇ ಹಗರಣ, ಭ್ರಷ್ಟಾಚಾರವಿಲ್ಲದೆ ಆಡಳಿತ ನಡೆಸಿದ್ದರು ಎಂದು ಟ್ವೀಟ್ ಮಾಡಿದ್ದಾರೆ. ಬಿಜೆಪಿ ಪಕ್ಷ ಮತ್ತು ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರಿಗೆ ಶುಭ ಹಾರೈಸಿದ್ದಾರೆ

ಫ್ರೆಶ್ ನ್ಯೂಸ್

Latest Posts

Featured Videos