ಬೆಳಗಾವಿ: ಕೆಎಂಎಫ್ ಗಾದಿಗೆ ಗುದ್ದಾಟ

ಬೆಳಗಾವಿ: ಕೆಎಂಎಫ್ ಗಾದಿಗೆ ಗುದ್ದಾಟ

ಬೆಳಗಾವಿ, ಮೇ. 10,ನ್ಯೂಸ್ ಎಕ್ಸ್ ಪ್ರೆಸ್: ಬೆಳಗಾವಿ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಆಡಳಿತ ಮಂಡಳಿ (ಕೆಎಂಎಫ್) ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯಲಿದೆ. ಅಧ್ಯಕ್ಷ ಸ್ಥಾನದ ಆಯ್ಕೆ ಅವಿರೋಧವಾಗಿ ನಡೆಯುತ್ತದೆಯೋ ಅಥವಾ ಚುನಾವಣೆ ನಡೆಯುತ್ತದೋ ಎನ್ನುವ ವಿಷಯವಾಗಿ ಈಗ ಚರ್ಚೆ ಆರಂಭಗೊಂಡಿದೆ. ಇಂದು ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಆಡಳಿತ ಮಂಡಳಿ 2.30ಕ್ಕೆ ಮತದಾನ ನಡೆಯಲಿದೆ.

ವಿವೇಕರಾವ್ ಪಾಟೀಲ್ 2ನೇ ಬಾರಿ ಅವಿರೋಧವಾಗಿ ಆಯ್ಕೆಗೆ ಬಹುತೇಕ ಖಚಿತ ಎಂದು ಹೇಳಲಾಗ್ತಿದೆ.  ಬೆಳಗಾವಿ  ಹೋಟೆಲ್ ನಲ್ಲಿ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆದಿದ್ದು, ಬೆಳಗಾವಿ ಜಿಲ್ಲೆಯಿಂದ ರಾಜ್ಯ ಕೆಎಂಎಫ್ ನಿರ್ದೇಶಕ ಸ್ಥಾನಕ್ಕೆ ಅಮರನಾಥ ಜಾರಕಿಹೊಳಿ ಅವಿರೋಧವಾಗಿ ಆಯ್ಕೆಯಾಗೋ ಸಾಧ್ಯತೆ ಇದೆ. ಈ ಮೂಲಕ ರಮೇಶ ಜಾರಕಿಹೊಳಿ ಪುತ್ರ ಅಮರನಾಥ ರಾಜಕೀಯಕ್ಕೆ ಎಂಟ್ರಿಯಾಗಲಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos