ಬೆಳಗಾವಿ, ಮೇ. 31, ನ್ಯೂಸ್ ಎಕ್ಸ್ ಪ್ರೆಸ್: ಬೆಳಗಾವಿಯ ಬೈಲೂರು ಗ್ರಾಮದ ಬಳಿ ನಾಗಪ್ಪ ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಕೊಲೆಯಾದತ (45) ಬಿಜೆಪಿ ಮುಖಂಡ. ನಾಗಪ್ಪ ಸಂತಿ ಬಸ್ತವಾಡ ಗ್ರಾಮಪಂಚಾಯಿತಿ ಸದಸ್ಯರಾಗಿದ್ದರು. ನೆನ್ನೆ ತಡರಾತ್ರಿ ಮನೆಗೆ ಮರುಳುತ್ತಿದ್ದ ವೇಳೆ ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ನಾಗಪ್ಪ ಅವರ ಕೊಲೆ ಆಗಿರಬಹದು ಎಂದು ಪೊಲೀಸರು ಊಹಿಸಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಖಾನಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.