ಬಳ್ಳಾರಿ ಬಿಜೆಪಿಯ ಭಿನ್ನಮತ ಸ್ಫೋಟ

ಬಳ್ಳಾರಿ ಬಿಜೆಪಿಯ ಭಿನ್ನಮತ ಸ್ಫೋಟ

ಬಳ್ಳಾರಿ, ಅ. 29 : ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ (ಬುಡಾ) ಅಧ್ಯಕ್ಷರ ನೇಮಕ ವಿಚಾರದಲ್ಲಿ ಉಂಟಾಗಿರುವ ಗೊಂದಲದಿಂದ ಬೇಸತ್ತು ಬಳ್ಳಾರಿ ಜಿಲ್ಲಾಧ್ಯಕ್ಷರೂ ಸೇರಿದಂತೆ 48 ಜನ ವಿವಿಧ ಪದಾಧಿಕಾರಿಗಳು ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ ಬೆಳವಣಿಗೆ ಗಣಿ ಜಿಲ್ಲೆಯಲ್ಲಿ ನಡೆದಿದೆ.
ಸುದ್ದಿಗೋಷ್ಠಿ ನಡೆಸಿರುವ ಜಿಲ್ಲಾಧ್ಯಕ್ಷ ಚನ್ನಬಸವನ ಗೌಡ ಪಾಟೀಲ್, “ದೇಶದಲ್ಲಿ ಬಿಜೆಪಿ ಪಕ್ಷ ತನ್ನ ವಿಚಾರ, ತತ್ವ ಸಿದ್ಧಾಂತ ಮೂಲಕ ಉನ್ನತ ಮಟ್ಟಕ್ಕೆ ಬೆಳೆಯುತ್ತಿದೆ. ಆದರೆ ಜಿಲ್ಲೆಯಲ್ಲಿ ಪಕ್ಷಕ್ಕೆ ಮುಜುಗರವಾಗುತ್ತಿರುವ ಘಟನೆಗಳು ಎದುರಾಗುತ್ತಿವೆ. ಇಂತಹ ಸಂದರ್ಭದಲ್ಲಿ ಅಧಿಕಾರ ತ್ಯಾಗ ಮಾಡುವ ಪರಿಸ್ಥಿತಿ ಬಂದಿದೆ,” ಎಂದಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos