ಬೆಂಗಳೂರು, ಮಾ, 26, ನ್ಯೂಸ್ ಎಕ್ಸ್ ಪ್ರೆಸ್: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಭ್ಯರ್ಥಿಯಾಗಿ ವಾಟಾಳ್ ನಾಗರಾಜ್ ಸ್ಪರ್ಧಿಸಲಿದ್ದಾರೆ.
ಇಂದು ವಾಟಾಳ್ ನಾಗರಾಜ್ ಅವರು ಬಿಬಿಎಂಪಿ ದಕ್ಷಿಣ ವಲಯ ಕಚೇರಿಗೆ ಜಟಕಾ ಗಾಡಿಯಲ್ಲಿ ಬಂದು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಲೋಕಸಭೆಯಲ್ಲಿ ಕನ್ನಡದ ಪರ ಧ್ವನಿ ಎತ್ತುವ ಒಬ್ಬರೂ ಸಂಸದರಿಲ್ಲ. ಹೀಗಾಗಿ ಕನ್ನಡದ ಅಭ್ಯರ್ಥಿಯಾಗಿ ನಾನು ಕಣಕ್ಕೆ ಇಳಿದಿದ್ದೇನೆ ಎಂದರು.