ಬೆಂಗಳೂರು, ಮಾ.26, ನ್ಯೂಸ್ ಎಕ್ಸ್ ಪ್ರೆಸ್: ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದ ಚುನಾವಣಾ ವಿಚಾರವಾಗಿ ಕೆಪಿಸಿಸಿ ಕಚೇರಿಯಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಪ್ರಮುಖ ನಾಯಕರ ಸಭೆ ಕರೆಯಲಾಗಿದೆ.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಈ ಸಭೆಯಲ್ಲಿ ಅಭ್ಯರ್ಥಿಯಾದ ಕೃಷ್ಣ ಭೈರೇಗೌಡ, ಶಾಸಕರಾದ ಎಸ್.ಟಿ. ಸೋಮಶೇಖರ್, ಭೈರತಿ ಸುರೇಶ್, ಭೈರತಿ ಬಸವರಾಜು, ಅಕಂಡ ಶ್ರೀನಿವಾಸ್ ಮೂರ್ತಿ ಹಾಗೂ ಜಿಲ್ಲಾಧ್ಯಕ್ಷ ಎಂ.ರಾಜಕುಮಾರ್ ಭಾಗವಹಿಸಿದ್ದರು.
ಸಭೆಯಲ್ಲಿ ಮೈತ್ರಿ ಅಭ್ಯರ್ಥಿಯಾದ ಕೃಷ್ಣ ಬೈರೇಗೌಡರ ಗೆಲುವಿನ ಕಾರ್ಯತಂತ್ರದ ಕುರಿತು ಚರ್ಚಿಸಲಾಗಿದೆ ಎನ್ನಲಾಗಿದೆ.