ಬೆಂಗಳೂರು ಉತ್ತರ ಕ್ಷೇತ್ರ; ಕೈ ನಾಯಕರ ಸಭೆ

ಬೆಂಗಳೂರು ಉತ್ತರ ಕ್ಷೇತ್ರ; ಕೈ ನಾಯಕರ ಸಭೆ

ಬೆಂಗಳೂರು, ಮಾ.26, ನ್ಯೂಸ್ ಎಕ್ಸ್ ಪ್ರೆಸ್: ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದ ಚುನಾವಣಾ ವಿಚಾರವಾಗಿ ಕೆಪಿಸಿಸಿ ಕಚೇರಿಯಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಪ್ರಮುಖ ನಾಯಕರ ಸಭೆ ಕರೆಯಲಾಗಿದೆ.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಈ ಸಭೆಯಲ್ಲಿ ಅಭ್ಯರ್ಥಿಯಾದ ಕೃಷ್ಣ ಭೈರೇಗೌಡ, ಶಾಸಕರಾದ ಎಸ್.ಟಿ. ಸೋಮಶೇಖರ್, ಭೈರತಿ ಸುರೇಶ್, ಭೈರತಿ ಬಸವರಾಜು, ಅಕಂಡ ಶ್ರೀನಿವಾಸ್ ಮೂರ್ತಿ ಹಾಗೂ ಜಿಲ್ಲಾಧ್ಯಕ್ಷ ಎಂ.ರಾಜಕುಮಾರ್ ಭಾಗವಹಿಸಿದ್ದರು.

ಸಭೆಯಲ್ಲಿ ಮೈತ್ರಿ ಅಭ್ಯರ್ಥಿಯಾದ ಕೃಷ್ಣ ಬೈರೇಗೌಡರ ಗೆಲುವಿನ ಕಾರ್ಯತಂತ್ರದ ಕುರಿತು ಚರ್ಚಿಸಲಾಗಿದೆ ಎನ್ನಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos