ಬೆಂಗಳೂರು , ಮೇ.16, ನ್ಯೂಸ್ ಎಕ್ಸ್ ಪ್ರೆಸ್ : ಬೆಂಗಳೂರು ನಗರದಲ್ಲಿ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ ವಿಪರೀತವಾಗಿ ಮುಂದುವರೆದಿದೆ. ನಗರದ ಮತ್ತೀಕೆರೆ ಬಳಿಯ ನೇತಾಜಿ ನಗರದಲ್ಲಿ ಮತ್ತೊಂದು ವಿದ್ಯುತ್ ಅವಘಡ ಸಂಭವಿಸಿದೆ. ನೆತಾಜಿ ನಗರದ ನಿವಾಸಿ ರಮಾದೇವಿ- ಅಂಬರೀಶ್ ದಂಪತಿಗೆ ಸೇರಿದ ಪುತ್ರ ನಿಖಿಲ್ (14) ಎಂಬಾತನ್ನು ರಜೆ ಹಿನ್ನೆಲೆಯಲ್ಲಿ ಬಾಲಕ ಮನೆಯ ಮುಂದೆ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್ ಹೊಡೆದು ಮೂರ್ಛೆ ಹೋಗಿದ್ದಾನೆ. ಶಾಕ್ನಿಂದ ಗಂಭೀರವಾಗಿ ಗಾಯಗೊಂಡಿದ್ದ ಬಾಲಕನ ದೇಹ ಶೇ.40 ರಷ್ಟು ಸುಟ್ಟುಹೋಗಿದೆ ಎಂದು ತಿಳಿದುಬಂದಿದೆ.
ಕಳೆದ 15 ದಿನಗಳ ಅವಧಿಯಲ್ಲಿ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಎರಡು ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಬಿಬಿಎಂಪಿ ಮೇಯರ್ ಗಂಗಾಬಿಕೆ,ಕಾರ್ಪೊರೇಟರ್ ಜಯಪ್ರಕಾಶ್ ಮತ್ತು ಬೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ