ಮಂಡ್ಯ, ಮೇ.11, ನ್ಯೂಸ್ ಎಕ್ಸ್ ಪ್ರೆಸ್: ಸಾವಿಗೆ ಐಪಿಎಲ್ ಬೆಟ್ಟಿಂಗ್ ಕಾರಣ ಎಂದು ಹೇಳಲಾಗುತ್ತಿದ್ದು, ನಗರದ ಬೋವಿ ಕಾಲೋನಿಯ ಲೋಕೇಶ್ (೨೪) ಮೃತ ದುರ್ದೈವಿ. ಐಪಿಎಲ್ ಬೆಟ್ಟಿಂಗ್ ದಂಧೆಯ ವ್ಯಸನಿಯಾಗಿದ್ದ ಲೋಕೇಶ್ ಸಾಲಕ್ಕೆ ಸಿಲುಕಿದ್ದ ಎಂದು ಹೇಳಲಾಗಿದೆ. ಸಾಲದ ಸುಳಿಗೆ ಸಿಲುಕಿ ನೇಣು ಬಿಗಿದುಕೊಂಡು ಆತ್ಮಹತ್ಯಗೆ ಯತ್ನಿಸಿದ್ದ ಯುವಕ ಕೊನೆಗೂ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿರುವ ಘಟನೆ ನಗರದ ಬೋವಿ ಕಾಲೋನಿಯಲ್ಲಿಂದು ನಡೆದಿದೆ. ಸಾವಿಗೆ ಐಪಿಎಲ್ ಬೆಟ್ಟಿಂಗ್ ಕಾರಣ ಎಂದು ಹೇಳಲಾಗುತ್ತಿದ್ದು, ನಗರದ ಬೋವಿ ಕಾಲೋನಿಯ ಲೋಕೇಶ್ (೨೪) ಮೃತ ದುರ್ದೈವಿ. ಐಪಿಎಲ್ ಬೆಟ್ಟಿಂಗ್ ದಂಧೆಯ ವ್ಯಸನಿಯಾಗಿದ್ದ ಲೋಕೇಶ್ ಸಾಲಕ್ಕೆ ಸಿಲುಕಿದ್ದ ಎಂದು ಹೇಳಲಾಗಿದೆ. ಸಾಲಬಾಧೆ ತಾಳಲಾರದೆ ಲೋಕೇಶ್ ಒಂದು ವಾರದ ಹಿಂದೆ ನೇಣಿಗೆ ಯತ್ನಿಸಿದ್ದ. ತೀವ್ರ ಅಸ್ವಸ್ಥಗೊಂಡಿದ್ದ ಆತನನ್ನು ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾನೆ. ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.