ಭಗತ್ ಸಿಂಗ್, ರಾಜ್ ಗುರು, ಸುಖ್ ದೇವ್ ಭಾರತ ರತ್ನ ನೀಡಿ

ಭಗತ್ ಸಿಂಗ್, ರಾಜ್ ಗುರು, ಸುಖ್ ದೇವ್ ಭಾರತ ರತ್ನ ನೀಡಿ

ನವದೆಹಲಿ ,ಅ. 26 : ಭಗತ್ ಸಿಂಗ್, ರಾಜ್ ಗುರು, ಸುಖ್ ದೇವ್ ಸ್ವಾತಂತ್ರ್ಯ ಹೋರಾಟಗಾರರಾದ ಇವರಿಗೆ ಸರ್ವೋಚ್ಛ ನಾಗರಿಕ ಪ್ರಶಸ್ತಿ ಭಾರತ ರತ್ನ ನೀಡಬೇಕೆಂದು ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಆಗ್ರಹಿಸಿದ್ದಾರೆ.
ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿರುವ ಮನೀಶ್ ತಿವಾರಿ, ಈ ಮೂವರು ದೇಶಪ್ರೇಮದಲ್ಲಿ ಹೋರಾಟಗಾರರು ಈ ಪೀಳಿಗೆಗೆ ಸ್ಪೂರ್ತಿಯಾಗಿದ್ದಾರೆ. ಹಾಗಾಗಿ ಮುಂದಿನ ಗಣರಾಜ್ಯ ದಿನದಂದು ಈ ಮೂವರಿಗೆ ಮರಣೋತ್ತರ ಭಾರತ ರತ್ನ ನೀಡಬೇಕೆಂದು ಒತ್ತಾಯ ಮಾಡಿದ್ದಾರೆ. ಈ ಹಿಂದೆ ಅಸಾವುದ್ಧೀನ್ ಓವೈಸಿ ಕೂಡಾ ಭಗತ್ ಸಿಂಗ್, ರಾಜ್ ಗುರು, ಸುಖ್ ದೇವ್ ಗೆ ಭಾರತ ರತ್ನ ನೀಡಬೇಕೆಂದು ಒತ್ತಾಯಿಸಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos