ಬರ್ಮಿಂಗ್ಹ್ಯಾಮ್, ಜು. 2 : ಇಂಗ್ಲೆಂಡ್ನಿಂದ ಬ್ರೇಕ್ ಬಿದ್ದ ಬಳಿಕ ತುಸು ಹಿನ್ನಡೆ ಅನುಭವಿಸಿರುವ ಭಾರತ ತಂಡ, ಬಾಂಗ್ಲಾದೇಶ ವಿರುದ್ಧ ಮಂಗಳವಾರ ಇಲ್ಲಿ ನಡೆಯಲಿರುವ ಪಂದ್ಯದಲ್ಲಿ ಗೆದ್ದು ಐಸಿಸಿ ಏಕದಿನ ವಿಶ್ವಕಪ್ನ ಸೆಮಿಫೈನಲ್ಗೆ ಪ್ರವೇಶಿಸುವ ತವಕದಲ್ಲಿದೆ. ಬಾಕಿ ಇರುವ 2 ಪಂದ್ಯಗಳಲ್ಲಿ 1ರಲ್ಲಿ ಗೆದ್ದರೆ ನಾಕೌಟ್ ಹಂತದಲ್ಲಿ ಸ್ಥಾನ ಖಚಿತಗೊಳ್ಳಲಿದೆ. ಇಲ್ಲಿನ ಎಡ್ಜ್ಬಾಸ್ಟನ್ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ಕೆಲ ಬದಲಾವಣೆಗಳೊಂದಿಗೆ ಭಾರತ ಕಣಕ್ಕಿಳಿಯುವ ಸಾಧ್ಯತೆ ಇದೆ. ಕೇದಾರ್ ಜಾಧವ್ರನ್ನು ತಜ್ಞ ಬ್ಯಾಟ್ಸ್ಮನ್ ಆಗಷ್ಟೇ ಆಡಿಸಲಾಗುತ್ತಿದೆ. ಬೌಲಿಂಗ್ಗೆ ಅವರನ್ನು ಬಳಸಿಕೊಳ್ಳಲಾಗುತ್ತಿಲ್ಲ. ತಂಡದ ಈ ತಂತ್ರಗಾರಿಕೆ ಗೊಂದಲ ಸೃಷ್ಟಿಸಿದೆ. ಬದಲಿಗೆ ರವೀಂದ್ರ ಜಡೇಜಾರನ್ನು ಆಡಿಸುವ ನಿರೀಕ್ಷೆ ಇದೆ. ವೇಗಿ ಭುವನೇಶ್ವರ್ ಕುಮಾರ್ ಗಾಯದಿಂದ ಚೇತರಿಸಿಕೊಂಡಿದ್ದು, ಆಯ್ಕೆಗೆ ಲಭ್ಯರಿದ್ದಾರೆ.
ಕೆ.ಎಲ್.ರಾಹುಲ್ ಕಳೆದ ಪಂದ್ಯದಲ್ಲಿ ಗಾಯಗೊಂಡು, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ ತಮ್ಮ ಬ್ಯಾಟಿಂಗ್ ಲಯ ಮುಂದುವರಿಸಬೇಕಿದೆ. ಬಾಂಗ್ಲಾದೇಶದ ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಮೊಹಮದ್ ಶಮಿ, ಜಸ್ಪ್ರೀತ್ ಬುಮ್ರಾ ಕಟ್ಟಿಹಾಕಲಿದ್ದಾರೆ ಎನ್ನುವ ವಿಶ್ವಾಸ ತಂಡದ ಆಡಳಿತದಾಗಿದೆ.