ಬೆಂಗಳೂರು, ಆ. 29: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಗೆ ಬಿಗ್ ರಿಲೀಫ್ ಸಿಕ್ಕಿದೆ. ಹೌದು, ಜಂತಕಲ್ ಅಕ್ರಮ ಮೈನಿಂಗ್ ಪ್ರಕರಣಕ್ಕೆ ಸಂಬಂಧಿಸಿ ಎಸ್ಐಟಿ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದು, ಎಚ್ ಡಿ ಕೆ ಹೆಸರನ್ನು ಕೈ ಬಿಟ್ಟಿದೆ.
ಜಂತಕಲ್ ಅಕ್ರಮ ಮೈನಿಂಗ್ ಪ್ರಕರಣದಲ್ಲಿ ಕುಮಾರಸ್ವಾಮಿ ಶಾಮೀಲಾಗಿದ್ದಾರೆ ಎನ್ನುವ ಆರೋಪ ಕೇಳಿ ಬಂದಿತ್ತು. ಹೀಗಾಗಿ ಕುಮಾರಸ್ವಾಮಿ ವಿರುದ್ಧ ಐಪಿಸಿ ಸೆಕ್ಷನ್ 420, 465,467,468, 471 ಹಾಗೂ 120 (ಬಿ) ಮತ್ತು ಭ್ರಷ್ಟಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಆದರೆ ಈಗ ಸೂಕ್ತ ಸಾಕ್ಷ್ಯ ಸಿಗದ ಕಾರಣ ಪ್ರಕರಣದಿಂದ ಕುಮಾರಸ್ವಾಮಿ ಹೆಸರನ್ನು ಎಸ್ಐಟಿ ಕೈ ಬಿಟ್ಟಿದೆ. ಈ ಮೂಲಕ ಕುಮಾರಸ್ವಾಮಿ ನಿರಾಳವಾಗಿದ್ದಾರೆ.