ನವದೆಹಲಿ, ನ. 08: ಉಪಚುನಾವಣೆ ಮುಂದೂಡುವಂತೆ ಮಧ್ಯಂತರ ಅರ್ಜಿ ಸಲ್ಲಿಕೆ ಮಾಡಿದ್ದ ಅನರ್ಹ ಶಾಸಕರಿಗೆ ಬಿಗ್ ಶಾಕ್ ಅನ್ನು ಸುಪ್ರೀಂಕೋರ್ಟ್ ಇಂದು ನೀಡಿದೆ.
ನ್ಯಾ.ಎನ್.ವಿ.ರಮಣ ನೇತೃತ್ವದ ತ್ರಿಸದಸ್ಯ ಪೀ ಉಪಚುನಾವಣೆ ಮುಂದೂಡುವುದಕ್ಕೆ ಸಂಬಂಧಪಟ್ಟಂತೆ ಸ್ಪಷ್ಟನೆ ನೀಡಿದೆ. ಸೋಮವಾರದಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗುವುದರಿಂದ ಉಪಚುನಾವಣೆಯನ್ನು ಮುಂದೂಡಿಕೆ ಮಾಡುವಂತೆ ಅನರ್ಹ ಶಾಸಕಪರ ವಕೀಲರು ಅರ್ಜಿ ಸಲ್ಲಿಸಿದ್ದರು, ಆದರೆ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಪೀಠ ಚುನಾವಣೆಯನ್ನು ಮುಂದೂಡಲು ನಿರಾಕರಣೆ ಮಾಡಿದೆ. ಈ ಮೂಲಕ ಸೋಮವಾರದಿಂದ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಶುರುವಾಗುವ ಹಿನ್ನೆಲೆಯಲ್ಲಿ ಅನರ್ಹರು ಆತಂಕಕ್ಕೆ ಒಳಗಾಗಿದ್ದಾರೆ.
ಅನರ್ಹ ಶಾಸಕರ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ಸಮರ್ಪಕ ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಿದೆ. ಈ ಹಿನ್ನೆಲೆ ಅನರ್ಹ ಶಾಸಕರು ಬುಧವಾರ ಮಧ್ಯಂತರ ಅರ್ಜಿ ಸಲ್ಲಿಸಲಿದ್ದಾರೆ.