ಬೆಂಗಳೂರು: ರಾಜ್ಯದಲ್ಲಿ ಸೈಬರ್ ಕ್ರೈಂ ಪ್ರಕರಣಗಳ ಹಾವಳಿ ಹೆಚ್ಚಾಗಿದ್ದು. ಸೋಷಿಯಲ್ ಮೀಡಿಯಾದಿಂದ ಸಾರ್ವಜನಿಕ ವಲಯದಲ್ಲಿ ಶಾಂತಿ ಭಂಗ ಯತ್ನ ನಡೆಯುತ್ತಿದೆ. ಹೀಗಾಗಿ ಸುಳ್ಳು ಸುದ್ದಿಗಳ ಹಾವಳಿಗೆ ಕಡಿವಾಣ ಹಾಕಲು ಪೊಲೀಸ್ ಪಡೆಯಿಂದ ಹೊಸ ವಿಂಗ್ ಕಾರ್ಯಚರಣೆ ನಿರ್ವಹಿಸಲು ಸಿದ್ಧವಾಗುತ್ತಿದೆ.
ಬೆಂಗಳೂರಿನ ಪ್ರತಿ ಠಾಣೆಯಲ್ಲೂ ಸೋಷಿಯಲ್ ಮೀಡಿಯಾ ವಿಂಗ್ ರಚನೆಗೆ ಕಾರ್ಯ ಸಿದ್ಧತೆಗೊಂಡಿದೆ.
ಇನ್ಮುಂದೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಬಿತ್ತುವವರಿಗೆ ಭಯ ಶುರುವಾಗಿದೆ, ಸುಖಾ ಸುಮ್ಮನೆ ಬೇಕಾ ಬಿಟ್ಟಿಯಾಗಿ ಸುಳ್ಳು ಸುದ್ದಿ ಹರಡಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸಿಲಿಕಾನ್ ಸಿಟಿ ಪೊಲೀಸರು ಮುಂದಾಗಿದ್ದಾರೆ. ಸೋಷಿಯಲ್ ಮೀಡಿಯಾ ಅಕೌಂಟ್ ಇದೆ ಎಂದು ಸುಳ್ಳು ಸುದ್ದಿಗಳನ್ನು ಹರಡಿಸಿ ಷೇರ್ ಮಾಡುವವರ ಮೇಲೆ ಹದ್ದಿನ ಕಣ್ಣಿಡಲು ಸದ್ದಿಲ್ಲದೇ ಖಾಕಿ ಪಡೆ ಸಖತ್ ರೆಡಿ ಆಗಿದೆ.
ವರದಿಗಾರ
ಎ.ಚಿದಾನಂದ,ವಿಜಯನಗರ.