ಬೆಂಗಳೂರು, ಜೂ. 21: 5ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಇಂದು ಬಿಜೆಪಿ ವೈದ್ಯಕೀಯ ಪ್ರಕೋಷ್ಠದ ವತಿಯಿಂದ ಯೋಗ ದಿನಾಚರಣೆ ಆಯೋಜಿಸಲಾಗಿತ್ತು. ಯೋಗ ಕಾರ್ಯಕ್ರಮಕ್ಕೆ ರಾಜ್ಯ ಬಿಜೆಪಿ ಅಧ್ಯಕ್ಷರಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರು ಗಿಡಕ್ಕೆ ನೀರೆರೆಯುವ ಮೂಲಕ ಚಾಲನೆ ನೀಡಿದರು. ನಂತರ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಶಾಲಾ ಮಕ್ಕಳೊಂದಿಗೆ ಶ್ರೀ ಯಡಿಯೂರಪ್ಪ ಅವರು ಸ್ವತಃ ಯೋಗಾಭ್ಯಾಸ ಮಾಡಿ ಯುವಕರಿಗೆ ಪ್ರೇರಣೆ ನೀಡಿದರು. ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶ್ರೀ ಎನ್.ರವಿಕುಮಾರ್, ಖ್ಯಾತ ವೈದ್ಯರಾದ ಡಾ.ಆನಂದ್ ಧೋತಿಹಾಳ್ ಅವರು ಈ ಸಂದರ್ಭದಲ್ಲಿ ಅತಿಥಿಗಳಾಗಿ ಭಾಗವಹಿಸಿದ್ದರು.