ನವದೆಹಲಿ, ಏ. 24, ನ್ಯೂಸ್ ಎಕ್ಸ್ ಪ್ರೆಸ್: ನವದೆಹಲಿಯ ವಾಯುವ್ಯ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಜನಪ್ರಿಯ ಸೂಫಿ ಗಾಯಕ ಹನ್ಸ್ ರಾಜ್ ಹನ್ಸ್ ಅವರು ಇಂದು ನಾಮಪತ್ರ ಸಲ್ಲಿಸಿದರು. ಸಂಸದ ಉದಿತ್ ರಾಜ್ ಅವರ ಬದಲಿಗೆ ಹನ್ಸ್ ರಾಜ್ ಅವರ ಹೆಸರನ್ನು ಅಂತಿಮಗೊಳಿಸಿ, ಪ್ರಕಟಿಸಲಾಗಿತ್ತು.
ನಾಮಪತ್ರ ಸಲ್ಲಿಸಿದ ನಂತರ ಮಾತನಾಡಿದ, ಗಾಯಕ ಹನ್ಸ್ ರಾಜ್ ಹನ್ಸ್ ಅವರು, ನಾನು ಚಿಕ್ಕಂದಿನಿಂದಲೂ ಹೋರಾಟ ನಡೆಸುತ್ತಾ ಬಂದಿದ್ದೇನೆ, ನಾನು ಗೆಲ್ಲಲೇ ಬೇಕಿದೆ. ತೋಟದ ಕಾರ್ಮಿಕನ ಮಗನಾಗಿ ನಾನು ಪರಿಶ್ರಮದಿಂದ ಈ ಹಂತಕ್ಕೇರಿದ್ದೇನೆ. ಪ್ರಧಾನಿ ಮೋದಿ ಅವರು ನನ್ನ ಹೀರೋ ಎಂದರು.