ಸಾಗರ, ಮಾ.26, ಮಾ, 26, ನ್ಯೂಸ್ ಎಕ್ಸ್ ಪ್ರೆಸ್: ಇಲ್ಲಿನ ಮಾರ್ಕೆಟ್ ರಸ್ತೆಯಲ್ಲಿರುವ ವೀರಶೈವ ಸಭಾ ಭವನದಲ್ಲಿ ನಡೆಯುತ್ತಿದ್ದ ಗುಗ್ಗಳ ಕಾರ್ಯಕ್ರಮದಲ್ಲಿ ಬಿಜೆಪಿ ಸಾಧನೆಯ ಕರಪತ್ರಗಳನ್ನು ಹಂಚುತ್ತಿದ್ದ ಆರೋಪದಲ್ಲಿ ಮಂಜುನಾಥ್ ಎಂಬುವವನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ದೂರಿನ ಹಿನ್ನೆಲೆಯಲ್ಲಿ ವೀರಶೈವ ಸಭಾ ಭವನಕ್ಕೆ ಚುನಾವಣಾ ಅಧಿಕಾರಿಗಳು ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಗುಗ್ಗಳ ಕಾರ್ಯಕ್ರಮದ ಅನ್ನ ಸಂತರ್ಪಣೆ ನಡೆಯುತ್ತಿದ್ದ ಸ್ಥಳದಲ್ಲಿ ಆರೋಪಿ ಮಂಜುನಾಥ್ ಬಿಜೆಪಿ ಪರ ಕರಪತ್ರಗಳನ್ನು ಹಂಚುತ್ತಿದ್ದನೆನ್ನಲಾಗಿದೆ.
ಮಂಜುನಾಥ್ ಹಾಗೂ ಕರಪತ್ರವನ್ನು ಚುನಾವಣಾ ಅಧಿಕಾರಿಗಳು ಸಾಗರ ಉಪವಿಭಾಗಾಧಿಕಾರಿಗಳ ವಶಕ್ಕೆ ನೀಡಿದ್ದಾರೆ.