ರಾಜ್ಯದಲ್ಲಿ ‘ಡಿ.9ರ ನಂತರ ಬಿಜೆಪಿಗೆ ಆತಂಕ: ಸಿದ್ದು

ರಾಜ್ಯದಲ್ಲಿ ‘ಡಿ.9ರ ನಂತರ ಬಿಜೆಪಿಗೆ ಆತಂಕ: ಸಿದ್ದು

ಮಂಡ್ಯ, ನ. 22: ರಾಜ್ಯದಲ್ಲಿ 15 ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಪ್ರಕಟವಾದ ಕೂಡಲೇ ಸಿಎಂ ಯಡಿಯೂರಪ್ಪ ಕುರ್ಚಿಗೆ ಕಂಟಕ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಹೇಳಿದರು.

ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಚಂದ್ರಶೇಖರ್ ಪರವಾಗಿ ಮರಡಿಲಿಂಗೇಶ್ವರ ಕ್ಷೇತ್ರ, ಕಿಕ್ಕೇರಿ, ಮಂದಗೆರೆ, ಅಕ್ಕಿಹೆಬ್ಬಾಳು, ಸೋಮನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಮತಯಾಚನೆ ಮಾಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ಉಪಚುನಾವಣೆ ಫಲಿತಾಂಶದ ನಂತರ ಬಿಜೆಪಿ ಸರ್ಕಾರ ಆಂತರಿಕ ಕಚ್ಚಾಟದಿಂದ ಸರ್ಕಾರ ಬೀಳಬಹುದು ಎಂದರು.

ಅನರ್ಹ ಶಾಸಕರು ಜನಾದೇಶ ತಿರಸ್ಕರಿಸಿದ ಕಾರಣ 15 ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದೆ. 12ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ. ಕ್ಷೇತ್ರದ ಮತದಾರರು ಬಿಜೆಪಿ ಪಕ್ಷಕ್ಕೆ ಪಕ್ಷಾಂತರವಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ನಾರಾಯಣಗೌಡ ಸೇರಿದಂತೆ ಎಲ್ಲಾ 15 ಜನ ಅನರ್ಹ ಶಾಸಕರೂ ಯಾವುದೇ ಕಾರಣಕ್ಕೂ ಮತ್ತೆ ವಿಧಾನಸಭೆಗೆ ಪ್ರವೇಶಿಸದಂತೆ ಎಚ್ಚರ ವಹಿಸಿ ಮತಹಾಕಬೇಕು. ಕೆ.ಆರ್ .ಪೇಟೆಯಲ್ಲಿ ಕೆ.ಬಿ.ಚಂದ್ರಶೇಖರ್, ಹುಣಸೂರು ಕ್ಷೇತ್ರದಲ್ಲಿ ಎಚ್ .ಪಿ.ಮಂಜುನಾಥ್ ಸೇರಿದಂತೆ 12 ಕ್ಕೂ ಹೆಚ್ಚಿನ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

 

ಫ್ರೆಶ್ ನ್ಯೂಸ್

Latest Posts

Featured Videos