ಬಿಜೆಪಿಗೆ ವೋಟ್ ಹಾಕಿದ್ರೆ ಸಂವಿಧಾನಕ್ಕೆ ತೊಂದರೆ

ಬಿಜೆಪಿಗೆ ವೋಟ್ ಹಾಕಿದ್ರೆ ಸಂವಿಧಾನಕ್ಕೆ ತೊಂದರೆ

ಮೈಸೂರು, . 16, ನ್ಯೂಸ್ ಎಕ್ಸ್ ಪ್ರೆಸ್: ಕರ್ನಾಟಕ ರಾಜ್ಯ, ನಗರ ಪಾಲಿಕೆ, ಪುರಸಭೆ, ನಗರಸಭೆ ಪೌರಕಾರ್ಮಿಕರು ಮೈತ್ರಿ ಅಭ್ಯರ್ಥಿ ವಿಜಯ ಶಂಕರ್ಗೆ ಬೆಂಬಲ ಸೂಚಿಸಿದ್ದು, ಪ್ರತಾಪ್ ಸಿಂಹ ಮನೆಗೆ, ವಿಜಯಶಂಕರ್ ಪಾರ್ಲಿಮೆಂಟಿಗೆ ಎಂದು ಘೋಷಣೆ ಕೂಗಿದ್ದಾರೆ.

ಪೌರ ಕಾರ್ಮಿಕ ಸಂಘದ ಜಿಲ್ಲಾಧ್ಯಕ್ಷ ಪಳನಿ ಸ್ವಾಮಿ, ಪ್ರತಾಪ್ ಸಿಂಹ ಸಂಸದರಾಗಿ ಒಮ್ಮೆಯೂ ಪೌರಕಾರ್ಮಿಕರ ಸಮಸ್ಯೆಗೆ ಸ್ಪಂದಿಸಿಲ್ಲ. ಮೈಸೂರು-ಕೊಡಗು ಕ್ಷೇತ್ರದಲ್ಲಿ 1 ಲಕ್ಷದ 20 ಸಾವಿರಕ್ಕೂ ಹೆಚ್ಚು ಪೌರಕಾರ್ಮಿಕರಿದ್ದಾರೆ. ನಾವೆಲ್ಲರೂ ಮೈತ್ರಿ ಅಭ್ಯರ್ಥಿಯನ್ನ ಬೆಂಬಲಿಸುತ್ತೇವೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಹಲವು ಕೊಡುಗೆ ನೀಡಿದ್ದಾರೆ. ಪ್ರತಾಪ್ ಸಿಂಹನಿಗೆ ಜನರೇ ಬೈಯುತ್ತಿದ್ದಾರೆ, ನಾವು ಏನ್ ಹೇಳೋದು ಬೇಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ನರೇಂದ್ರ ಮೋದಿ ಸ್ವಚ್ಛಭಾರತ ಅಂತಾರೆ, ಆದರೆ, ಪೌರಕಾರ್ಮಿಕರಿಗೆ ನರೇಂದ್ರ ಮೋದಿ ಕಾರ್ಯಕ್ರಮ ಏನು? ಸ್ವಚ್ಛ ಭಾರತ ಮಾಡೋ ನಮಗೆ ಮನೆಗಳೇ ಇಲ್ಲ. ಬಿಜೆಪಿಗೆ ನಾವು ವೋಟ್ ಹಾಕಿದರೆ ಬಾಬಾ ಸಾಹೇಬರು ಬರೆದ ಸಂವಿಧಾನದಕ್ಕೆ ತೊಂದರೆಯಾಗಲಿದೆ ಎಂದು ಕಿಡಿಕಾರಿದರು.

 

ಫ್ರೆಶ್ ನ್ಯೂಸ್

Latest Posts

Featured Videos