ಬಿಜೆಪಿ ಪಕ್ಷಕ್ಕೆ ಗುಡ್ ಬೈ ಹೇಳಲಿರು 2 ನಾಯಕರು

ಬಿಜೆಪಿ ಪಕ್ಷಕ್ಕೆ ಗುಡ್ ಬೈ ಹೇಳಲಿರು 2 ನಾಯಕರು

ಕಲಬುರ್ಗಿ, ಮಾ.16, ನ್ಯೂಸ್ ಎಕ್ಸ್ ಪ್ರೆಸ್:  ನಡೆಯಲಿರುವ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಘೋಷಣೆ ಮುನ್ನವೇ ಜಿಲ್ಲಾ ಬಿಜೆಪಿ ಘಟಕದಲ್ಲಿ ಭಿನ್ನಮತ ಸ್ಪೋಟಗೊಂಡಿದ್ದು, ಬಿಜೆಪಿಯ 2 ನಾಯಕರು ಪಕ್ಷಕ್ಕೆ ಗುಡ್ ಬೈ ಹೇಳಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ರಾಜ್ಯ ಬಿಜೆಪಿ ಉಪಾಧ್ಯಕ್ಷ, ಮಾಜಿ ಸಚಿವ ಬಾಬುರಾವ್ ಚೌಹ್ಹಾಣ್ ಮತ್ತು ಗುರುಮಠಕಲ್ ಬಿಜೆಪಿ ಮುಖಂಡ ಶ್ಯಾಮರಾವ್ ಪ್ಯಾಟಿ ಬಿಜೆಪಿಗೆ ಗುಡ್ ಬೈ ಹೇಳಲು ನಿರ್ಧರಿಸಿದ್ದಾರೆ ಎನ್ನಲಾಗಿದ್ದು, ಮಾ. 18ರಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಬಾಬುರಾವ್ ಚೌಹ್ಹಾಣ್ ಹಾಗೂ ಶ್ಯಾಮರಾವ್ ಪ್ಯಾಟಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.

ನಗರದ ಎಸ್ ವಿ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶ ನಡೆಯಲಿದ್ದು, ಬಿಜೆಪಿ ನಾಯಕರನ್ನು ಸೆಳೆಯಲು ಕಾಂಗ್ರೆಸ್ ದೊಡ್ಡ ಸಂಚು ಹಾಕುತ್ತಿದೆ ಎನ್ನಲಾಗಿದೆ.

 

ಫ್ರೆಶ್ ನ್ಯೂಸ್

Latest Posts

Featured Videos