ಬೆಂಗಳೂರು, ಅ. 12: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಬಿಜೆಪಿ ಸರ್ಕಾರದ ಭವಿಷ್ಯ ಕುರಿತಂತೆ ಹೊಸ ಬಾಂಬ್ ಸಿಡಿಸಿದ್ದಾರೆ.
ವಿಧಾನಸಭೆ ವಿರೋಧಪಕ್ಷದ ನಾಯಕರಾಗಿ ಆಯ್ಕೆಯಾದ ಬಳಿಕ ಕಾಂಗ್ರೆಸ್ ಶಾಸಕರೊಂದಿಗೆ ಅನೌಪಚಾರಿಕವಾಗಿ ಮಾತನಾಡುವ ವೇಳೆ, ಬಿಜೆಪಿ ಸರ್ಕಾರ ಜನವರಿ ಅಥವಾ ಫೆಬ್ರವರಿಯಲ್ಲಿ ಪತನಗೊಳ್ಳಲಿದ್ದು, ಚುನಾವಣೆಗೆ ಸಜ್ಜಾಗುವಂತೆ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಯಡಿಯೂರಪ್ಪನವರ ಸರ್ಕಾರ ಕಡೇ ಪಕ್ಷ ಒಂದು ವರ್ಷಗಳ ಕಾಲವಾದರೂ ಅಧಿಕಾರದಲ್ಲಿದ್ದರೆ ಸರ್ಕಾರದ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಚುನಾವಣೆಗೆ ಹೋಗಬಹುದಿತ್ತು. ಆದರೆ ಈ ಸರ್ಕಾರ ಅಲ್ಲಿಯವರೆಗೂ ಮುಂದುವರೆಯುವುದು ಕಷ್ಟ ಎಂದು ಹೇಳಿದ ಸಿದ್ದರಾಮಯ್ಯ, ಈಗಿನಿಂದಲೇ ಚುನಾವಣೆಗೆ ಸಿದ್ಧತೆ ನಡೆಸಿ ಎಂದು ಶಾಸಕರುಗಳಿಗೆ ಸಲಹೆ ನೀಡಿದ್ದಾರೆ.