ರೈತರಿಗೆ ಸಿಹಿಸುದ್ದಿ ನೀಡಿದ ಬಿಜೆಪಿ ಸರ್ಕಾರ!

ರೈತರಿಗೆ ಸಿಹಿಸುದ್ದಿ ನೀಡಿದ ಬಿಜೆಪಿ ಸರ್ಕಾರ!

ಬೆಂಗಳೂರು, ಸೆ. 20: ರಾಜ್ಯದಲ್ಲಿ ಮೈತ್ರಿ ಸರ್ಕಾರ ಪತನಗೊಂಡು ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ರಾಜ್ಯದ ರೈತರಿಗೆ ಬಿಎಸ್ ವೈ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಕೃಷಿ ಹಾಗೂ ತೋಟಗಾರಿಕೆ ಉತ್ಪನ್ನಗಳ ಬೆಲೆ ಕುಸಿದಾಗ ಅವುಗಳಿಗೆ ಬೆಂಬಲ ಬೆಲೆ ನಿಗದಿಪಡಿಸಲು ಡಿಸಿಎಂ ಲಕ್ಷ್ಮಣ್ ಸವದಿ ಅಧ್ಯಕ್ಷತೆಯಲ್ಲಿ ಐವರು ಸಚಿವರ ಕ್ಯಾಬಿನೆಟ್ ಉಪಸಮಿತಿ ರಚನೆ ಮಾಡಲಾಗಿದೆ.

ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ, ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಸಚಿವ ಸಂಪುಟ ಉಪ ಸಮಿತಿಯ ಸದಸ್ಯರಾಗಿದ್ದಾರೆ.

ಟೊಮೊಟೊ, ಭತ್ತ, ರಾಗಿ, ಮೆಕ್ಕೆಜೋಳ, ತೆಂಗಿನಕಾಯಿ, ಈರುಳ್ಳಿ, ತೊಗರಿ ಸೇರಿದಂತೆ ಹಲವಾರು ಬೆಳೆಗಳ ಬೆಲೆ ಮಾರುಕಟ್ಟೆಯಲ್ಲಿ ಕುಸಿದಾಗ ಬೆಂಬಲ ಬೆಲೆಗೆ ಸರ್ಕಾರದಿಂದ ಮಾರುಕಟ್ಟೆ ಮಧ್ಯಪ್ರವೇಶ ಮಾಡಿ ಬೆಲೆ ನಿಗದಿಪಡಿಸಲು ಈ ಸಮಿತಿ ಸಹಾಯ ಮಾಡಲಿದೆ.

 

ಫ್ರೆಶ್ ನ್ಯೂಸ್

Latest Posts

Featured Videos