ಬೆಂಗಳೂರು, ಡಿ. 14 : ಯಡಿಯೂರಪ್ಪ ಕೆಲಸ ಮಾಡ್ತಾರೆ. ಹೀಗಾಗಿ ಅವರೇ ಮುಂದಿನ ಮೂರುವರೆ ವರ್ಷ ಅಧಿಕಾರ ನಡೆಸಲಿ ಎಂದು ಸಿದ್ದರಾಮಯ್ಯ ಭೇಟಿ ಬಳಿಕ ಮಾಜಿ ಸಚಿವ ಜಿ. ಟಿ ದೇವೇಗೌಡ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಶನಿವಾರ ಮಾಧ್ಯಮಗಳೊಂದಿಗೆ ಉಪಚುನಾವಣೆ ವಿಚಾರವಾಗಿ ಮಾತನಾಡಿದ ಅವರು, ಸರ್ಕಾರ ಉಳಿಸುವ ಬಗ್ಗೆ ನಮ್ಮ ನಾಯಕರೇ ಹೇಳ್ತಿದರು. ಜನರೂ ಅದರ ಪ್ರಕಾರ ಮತ ಹಾಕಿದ್ದಾರೆ ಎಂದರು.
ಮೂರುವರೆ ವರ್ಷ ಆಡಳಿತ ಪಕ್ಷಕ್ಕೆ ಬೆಂಬಲ ಕೊಡ್ಬೇಕಿದೆ. ಯಡಿಯೂರಪ್ಪ ಅಭಿವೃದ್ಧಿ ಅಭಿವೃದ್ದಿ ಅಂತಾರೆ, ಅದು ಈಡೇರಬೇಕಾದರೆ ಆಡಳಿತ ವಿರೋಧ ಪಕ್ಷ ಒಟ್ಟಾಗಿ ಕೆಲಸ ಮಾಡ್ಬೇಕು, ಕರ್ನಾಟಕದಲ್ಲಿ ಜನ ಬುದ್ದಿವಂತರು ಇದ್ದಾರೆ. ಸುಭದ್ರ ಸರ್ಕಾರ ಬೇಕು ಅಂತ ಇದ್ದಾರೆ ಎಂದು ಜಿ.ಟಿ ದೇವೇಗೌಡ ಹೇಳಿದರು.