ಕೆ.ಆರ್.ಪುರ, ನ. 26: ಕ್ಷೇತ್ರದಲ್ಲಿ ಬಿಜೆಪಿ ಗಾಳಿ ಜೋರಾಗಿ ಬೀಸುತ್ತದೆ, ಮುಂಬರುವ ಉಪ ಚುನಾವಣೆಯಲ್ಲಿ ಬೈರತಿ ಬಸವರಾಜ್ ಅವರು ಹೆಚ್ಚಿನ ಮತಗಳ ಅಂತರದಲ್ಲಿ ಜಯಶೀಲರಾಗುತ್ತಾರೆ ಎಂದು ಬಿಜೆಪಿ ಮುಖಂಡ ಇಟಾಚಿ ಮಂಜುನಾಥ್ ವಿಶ್ವಾಸ ವ್ಯಕ್ತಪಡಿಸಿದರು.
ಕ್ಷೇತ್ರದ ರಾಮಮೂರ್ತಿ ನಗರ ವಾರ್ಡ್ ನ ಅಂಬೇಡ್ಕರ್ ನಗರದಲ್ಲಿ ಸ್ಥಳಿಯ ಕಾಂಗ್ರೆಸ್ ಮಾಜಿ ನಗರ ಸಭಾ ಸದಸ್ಯ ಜಿ. ಶ್ರೀನಿವಾಸ್, ಮುಖಂಡ ಇಟಾಚಿ ಮಂಜು ಅವರ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರಾದ ಬಾಬುರೆಡ್ಡಿ, ಪ್ರಕಾಶ್ ಬಾಬು, ನಾಗರಾಜ್, ಮುರುಗೇಶ್, ರಾಜ, ಅಪ್ಪಿ, ರವಿ, ನಾಗೇಶ್, ವಿಜಿ, ಜೆ.ಮಂಜ, ಅನಿಲ್ ಸೇರಿದಂತೆ ಹಲವಾರು ಕಾರ್ಯಕರ್ತರು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಇಟಾಚಿ ಮಂಜುನಾಥ್, ಕೆ.ಆರ್.ಪುರ ಬಿಜೆಪಿ ಅಭ್ಯರ್ಥಿ ಬಸವರಾಜ್ ಅವರ ಜೋರಿಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕಾಣೆಯಾಗಿದ್ದಾರೆ ಎಂದು ಹೇಳಿದರು. ಕ್ಷೇತ್ರದ ಅಭಿವೃದ್ಧಿಯ ದೃಷ್ಟಿಯಿಂದ ಬಿಜೆಪಿಗೆ ಮತನೀಡಿ ಎಂದು ಮನವಿ ಮಾಡಿದರು.