ಬೆಂಗಳೂರು: ಕೇಂದ್ರ ಸರ್ಕಾರದಿಂದ ಬಜೆಟ್ ಬಿಡುಗಡೆಯಲ್ಲಿ ರಾಜ್ಯಕ್ಕೆ ಅನುದಾನದ ಅನ್ಯಾಯವಾಗಿದೆ, ಇಂದು ಕಾಂಗ್ರೆಸ್ ಸರ್ಕಾರ ದೆಹಲಿಯ ಜಂತರ್ ಮಂತರ್ ನಲ್ಲಿ ಇಂದು ಪ್ರತಿಭಟನೆ ಆರಂಭವಾಗಿದೆ.
ಕಾಂಗ್ರೆಸ್ ಸರ್ಕಾರ ದೆಹಲಿಯಲ್ಲಿ ಚಲೋಗೆ ಪ್ರತಿಯಾಗಿ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಪ್ರತಿಭಟನೆ ಆರಂಭಿಸಿದೆ ಬಿಜೆಪಿ ಜೆಡಿಎಸ್ ನಿಂದ ಜಂಟಿ ಪ್ರತಿಭಟನೆಗೆ ಪ್ಲಾನ್ ಮಾಡಿದ್ದಾರೆ.
ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಇಂದು ಪ್ರತಿಭಟನೆ ಮಾಡಲಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಬಿಜೆಪಿ ಜೆಡಿಎಸ್ ನಿಂದ ಪ್ರತಿಭಟನೆ ಆರಂಭವಾಗಲಿದೆ.
ಬಿಎಸ್ ವೈ ವಿಜಯೇಂದ್ರ, ಆರ್ ಅಶೋಕ್ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಲಿದೆ. ಶಾಸಕರು ಪರಿಷತ್ ಸದಸ್ಯರಿಗೆ ಭಾಗಿಯಾಗಲು ಸೂಚನೆ ನೀಡಿದ್ದಾರೆ. ಬಿಜೆಪಿಯ ನಾಯಕರೆಲ್ಲರೂ ಇಂದು ಪ್ರತಿಭಟನೆಗೆ ಮುಂದಾಗಿದ್ದಾರೆ.