ಬಿಜೆಪಿ ಶಾಸಕ ಸಿಟಿ ರವಿ ಕಾರು ಢಿಕ್ಕಿ; ಇಬ್ಬರು ಮೃತ್ಯು

ಬಿಜೆಪಿ ಶಾಸಕ ಸಿಟಿ ರವಿ ಕಾರು ಢಿಕ್ಕಿ; ಇಬ್ಬರು ಮೃತ್ಯು

ಕುಟುಂಬಕ್ಕೆ ಸಾಂತ್ವಾನ ಹೇಳುವುದನ್ನು ಬಿಟ್ಟು
ಪರಾರಿಯಾದ ಶಾಸಕ

ಬೆಂಗಳೂರು: ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಸಿಟಿ ರವಿಯ ಕಾರು ರಸ್ತೆಯಲ್ಲಿ ನಿಂತಿದ್ದ 2 ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ಸಮೀಪದ ಊರ್ಕೇನಹಳ್ಳಿ ಎಂಬಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.

ಮೃತರನ್ನು ಶಶಿಕುಮಾರ್ ಮತ್ತು ಸುನಿಲ್ ಎಂದು ಗುರುತಿಸಲಾಗಿದ್ದು, ಓರ್ವ ಗಂಭೀರ ಗಾಯಗೊಂಡಿದ್ದಾರೆ.

ಪ್ರವಾಸಕ್ಕೆಂದು ತೆರಳಿದ್ದ ಸುಮಾರು 12 ಯುವಕರು, ಊರ್ಕೇನಹಳ್ಳಿ ಬಳಿ ಮೂತ್ರ ವಿಸರ್ಜನೆಗಾಗಿ ಕಾರು ನಿಲ್ಲಿಸಿಕೊಂಡಿದ್ದರು.

ಈ ಸಂದರ್ಭ ಅತೀ ವೇಗವಾಗಿ ಬಂದ ಸಿಟಿ ರವಿ ಅವರಿದ್ದ ಕಾರು ಮೂವರು ಯುವಕರಿಗೆ ಢಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.

ಘಟನೆಯ ನಂತರ ಸ್ಥಳ ಮಹಜರು ಮಾಡದೆ ವಾಹನವನ್ನು ಸ್ಥಳಾಂತರಿಸಲಾಗಿದೆ ಎಂದು ಆರೋಪಿಸಲಾಗಿದೆ. ಘಟನೆಯ ನಂತರ ಕುಟುಂಬಕ್ಕೆ
ಸಾಂತ್ವಾನ ಹೇಳುವನ್ನು ಬಿಟ್ಟು, ಅಲ್ಲಿಂದ ಪರಾರಿಯಾಗಿ ಅತ್ಯಂತ ಕೃರತನ, ಮೆರೆದಿದ್ದಾರೆ ಎಂದು
ಆರೋಪಿಸಲಾಗಿದೆ.

ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos