ಬಿಜೆಪಿ ಮುಖಂಡನ ಬರ್ಬರ ಹತ್ಯೆ

ಬಿಜೆಪಿ ಮುಖಂಡನ ಬರ್ಬರ ಹತ್ಯೆ

ಕೊಲ್ಕತ್ತಾ ,ಅ.13 : ಬಿಜೆಪಿ ಮುಖಂಡನೋರ್ವನನ್ನು ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದ ಘಟನೆ ನಾಡಿಯಾ ಜಿಲ್ಲೆಯಲ್ಲಿ ನಡೆದಿದೆ.
ಹರಲಾ ದೇಬ್ ನಾಥ್ (55) ಕೊಲೆಯಾದ ಬಿಜೆಪಿ ಸ್ಥಳೀಯ ಮುಖಂಡ. ದಿನಸಿ ವ್ಯಾಪಾರಿಯಾಗಿದ್ದ ದೇಬ್ ನಾಥ್, ರಾತ್ರಿ 10 ಗಂಟೆಯ ವೇಳೆಯಲ್ಲಿ ತಮ್ಮ ಪತ್ನಿಯೊಂದಿಗೆ ಅಂಗಡಿಯಲ್ಲಿದ್ದರು. ಈ ವೇಳೆ ವ್ಯಾಪರಕ್ಕೆಂದು ಬಂದಿದ್ದ ಇಬ್ಬರು ಏಕಾಏಕಿ ಗುಂಡು ಹಾರಿಸಿದ್ದಾರೆ. ಪತ್ನಿ ಎದುರಲ್ಲೇ ದೇಬ್ ನಾಥ್ ಕೊನೆಯುಸಿರೆಳೆದಿದ್ದಾರೆ. ತಕ್ಷಣ ಆಸ್ಪತ್ರೆಗೆ ಕೊಂಡ್ಯೊಯ್ಯಲಾಯಿತಾದರೂ ಉಳಿಸಿಕೊಳ್ಳಲಾಗಲಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.
ಈ ಕೃತ್ಯದ ಹಿಂದೆ ತೃಣಮೂಲ ಕಾಂಗ್ರೆಸ್ ಕೈವಾಡವಿದೆ. ಸರ್ಕಾರ ಯಾವುದೇ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ ಎಂದು ನಾಡಿಯಾ ಬಿಜೆಪಿ ಜಿಲ್ಲಾಧ್ಯಕ್ಷ ಆರೋಪಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos