ಈ ಬಾರಿ ಚುನಾವಣೆಯಲ್ಲಿ ಬಿಜೆಪಿ ಮನೆಗೆ : ದಿನೇಶ್ ಗುಂಡೂರಾವ್

ಈ ಬಾರಿ ಚುನಾವಣೆಯಲ್ಲಿ ಬಿಜೆಪಿ ಮನೆಗೆ : ದಿನೇಶ್ ಗುಂಡೂರಾವ್

ಬೆಂಗಳೂರು, ನ. 26: ರಾಷ್ಟ್ರ, ರಾಜ್ಯದಲ್ಲಿ ಅನೈತಿಕ ರಾಜಕಾರಣ, ಪ್ರಜಾಪ್ರಭುತ್ವ ಕಗ್ಗೊಲೆ ಮಾಡುತ್ತಿರುವ ಬಿಜೆಪಿಗೆ ಈ ಬಾರಿ ಮತದಾರರು ಮನೆಗೆ ಕಳುಹಿಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಹಿನ್ನೆಲೆಯಲ್ಲಿ ಪ್ರಮುಖ ವಾರ್ಡ್ ಗಳಲ್ಲಿ ಪಕ್ಷದ ಅಭ್ಯರ್ಥಿಯಾಗಿ ಎಮ್. ಶಿವರಾಜು ಪರವಾಗಿ ಪ್ರಚಾರದಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್, ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪರ ಅಲೆ ಇದೆ. ಬಿಜೆಪಿ ಸರ್ಕಾರ ವಿರೋಧಿ ಆಡಳಿತ ಜನರ ಅರವಿಗೆ ಬಂದಿದೆ ಎಂದು ಹೇಳಿದರು.

ದೇಶದಲ್ಲಿ ಆರ್ಥಿಕ ಕುಸಿತದಿಂದ ಬಡವರು, ಮಧ್ಯಮ ವರ್ಗದವರು ಜನಜೀವನ ಸಂಕಷ್ಟದಲ್ಲಿ ಇದ್ದಾರೆ. ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಪ್ರಜ್ಞಾವಂತ ಮತದಾರರು ಇದ್ದಾರೆ. ಈ ಬಾರಿ ಚುನಾವಣೆಯಲ್ಲಿ ಜನರು ಬಿಜೆಪಿಯನ್ನು ಮನೆಗೆ ಕಳುಹಿಸಲಿದ್ದಾರೆ ಎಂದರು.

 

ಫ್ರೆಶ್ ನ್ಯೂಸ್

Latest Posts

Featured Videos