ಬಿಜೆಪಿ ವಕ್ತಾರರ ಮೇಲೆ ಅಪರಿಚಿತನಿಂದ ಶೂ ಎಸೆತ

ಬಿಜೆಪಿ ವಕ್ತಾರರ ಮೇಲೆ ಅಪರಿಚಿತನಿಂದ ಶೂ ಎಸೆತ

ನವದೆಹಲಿ, ಏ. 18, ನ್ಯೂಸ್ ಎಕ್ಸ್ ಪ್ರೆಸ್: ಇಂದು ನವದೆಹಲಿಯಲ್ಲಿ ನಡೆಯುತ್ತಿದ್ದ ಬಿಜೆಪಿ ಸುದ್ದಿಗೋಷ್ಠಿಯಲ್ಲಿ ಅಪರಿಚಿ ವ್ಯಕ್ತಿ ಒಬ್ಬ ಬಿಜೆಪಿ ವಕ್ತಾರ ಜಿವಿಎಲ್ ನರಸಿಂಹರಾವ್ ಅವರ ಮೇಲೆ ಶೂ ಎಸೆದ ಘಟನೆ ನಡೆದಿದೆ.

ಬೆಳಗ್ಗೆ ನವದೆಹಲಿಯಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ರಾಜ್ಯಸಭಾ ಸದಸ್ಯ ಹಾಗೂ ಬಿಜೆಪಿ ವಕ್ತಾರರಾಗಿರುವ ಜಿವಿಎಲ್ ನರಸಿಂಹ ರಾವ್ ಸುದ್ದಿಗೋಷ್ಠಿ ನಡೆಸುತ್ತಿದ್ದರು. ಈ ವೇಳೆ ಏಕಾಏಕಿ ಬಂದ ಅಪರಿಚಿತನೊಬ್ಬ ನರಸಿಂಹ ರಾವ್ ಅವರ ಮೇಲೆ ಶೂ ಎಸೆದಿದ್ದಾನೆ. ಇದೀಗ ಶೂ ಎಸೆದ ಶಕ್ತಿ ಭಾರ್ಗವ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos