ಲೋಕಸಭಾ: ಬಿಜೆಪಿಯ ರಣತಂತ್ರ!

ಲೋಕಸಭಾ: ಬಿಜೆಪಿಯ ರಣತಂತ್ರ!

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು, ಆಂತರಿಕ ಗೊಂದಲ, ವಿಪಕ್ಷ ನಾಯಕ ಹಾಗೂ ರಾಜ್ಯಾಧ್ಯಕ್ಷರಿಗೆ ಸಿಗದ ಬೆಂಬಲದಿಂದ ಸೊರಗಿದ್ದ ಬಿಜೆಪಿ ಪಡೆ ರಾಜ್ಯದಲ್ಲಿ ಚಿಗುರತೊಡಗಿದೆ. ಸೋಲು ಹಾಗೂ ಆಂತರಿಕ ಭಿನ್ನಮತದಿಂದ ಸೊರಗಿದ್ದ ಕಮಲಕ್ಕೆ ಸ್ವತಃ ಆಡಳಿತ ಪಕ್ಷ ಹಲವು ಅಸ್ತ್ರಗಳನ್ನು ನೀಡಿದೆ. ಇದನ್ನೇ ಬಳಕೆ ಮಾಡಿಕೊಂಡು ಬಿಜೆಪಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವ ವಾತಾವರಣ ಸೃಷ್ಟಿ ಮಾಡುವ ಪ್ರುಯತ್ನದಲ್ಲಿದೆ.

ಲೋಕಸಭಾ ಚುನಾವಣೆ ದೃಷ್ಟಿಯಿಂದ ಇಂದು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಮಾಧ್ಯಮ ಕಾರ್ಯಾಗಾರ ನಡೆಯಿತು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಕಾರ್ಯಾಗಾರವನ್ನು ಉದ್ಘಾಟಿಸಿ ಚುನಾವಣೆ ಹಿನ್ನೆಲೆಯಲ್ಲಿ ಮಾಧ್ಯಮ ಪ್ರಕೋಷ್ಠದ ಜವಾಬ್ದಾರಿ ಅತ್ಯಂತ ಮಹತ್ವದ್ದು ಎಂದು ತಿಳಿಸಿದರು.

ರಾಷ್ಟ್ರೀಯ ವಕ್ತಾರರಾದ ಸೈಯದ್ ಜಫರ್ ಇಸ್ಲಾಂ, ತೂಹಿನ್ ಸಿನ್ಹಾ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್, ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್ ಉಪಸ್ಥಿತರಿದ್ದರು. ರಾಜ್ಯ ವಕ್ತಾರರು, ಪಕ್ಷದ ಮುಖಂಡರು ಮತ್ತು ಅಪೇಕ್ಷಿತರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos