ಬೆಂಗಳೂರು, ಮೇ.6, ನ್ಯೂಸ್ ಎಕ್ಸ್ ಪ್ರೆಸ್: ಬ್ಲಾಕ್ಮೇಲ್ ಪ್ರಕರಣಕ್ಕೆಸಂಬಂಧಿಸಿದಂತೆ ಪತ್ರಕರ್ತ ಹೇಮಂತ್ನನ್ನು ನಿನ್ನೆ ಬಂಧಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಇನ್ನೂ ಏಳು ದಿನಗಳ ಕಾಲ ಕಸ್ಟಡಿಗೊಪ್ಪಿಸುವಂತೆ ಸಿಸಿಬಿ ಕೋರ್ಟ್ನಲ್ಲಿ ಮನವಿ ಮಾಡಿತ್ತು. ಖಾಸಗಿ ಚಾನೆಲ್ನ ಎಂಡಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಮಂತ್ನನ್ನು ಇನ್ನೂ ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡುವಂತೆ 1ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ. ಇವತ್ತು 1ನೇ ಎಸಿಎಂಎಂ ಕೋರ್ಟ್ಗೆ ಆರೋಪಿ ಹೇಮಂತ್ನನ್ನ ಹಾಜರುಪಡಿಸಿದ್ದರು. ಪತ್ರಕರ್ತನ ವಿರುದ್ಧ ಬ್ಲ್ಯಾಕ್ಮೇಲ್ ಪ್ರಕರಣ ಗಂಭೀರವಾಗಿದ್ದು, ಹೆಚ್ಚಿನ ವಿಚಾರಣೆ ನಡೆಸಬೇಕಾದ ಅವಶ್ಯಕತೆಯಿದೆ. ಹಾಗಾಗಿ ಇನ್ನೂ ಏಳು ದಿನ ಪೊಲೀಸ್ ಕಸ್ಟಡಿಗೆ ಆರೋಪಿ ಹೇಮಂತ್ನನ್ನ ಒಪ್ಪಿಸಬೇಕು ಅಂತಾ ಸಿಸಿಬಿ ಕೋರ್ಟ್ನಲ್ಲಿ ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಸಿಸಿಬಿಯ ಎಸಿಪಿ ಬಾಲರಾಜ್ ನೇತೃತ್ವದಲ್ಲಿ ಈ ಪ್ರಕರಣದ ಕುರಿತು ತನಿಖೆ ನಡೆಯುತ್ತಿದ್ದು, ಆರೋಪಿಯನ್ನ ಹೆಚ್ವಿನ ವಿಚಾರಣೆಗೊಳಪಡಿಸಲಿದ್ದಾರೆ.