ಕುವೆಂಪು ಜನ್ಮದಿನಕ್ಕೆ ರಕ್ತದಾನ ಶಿಬಿರ

ಕುವೆಂಪು ಜನ್ಮದಿನಕ್ಕೆ ರಕ್ತದಾನ ಶಿಬಿರ

ರಾಮನಗರ, ಜ. 01: ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ವಿಶ್ವಮಾನ, ರಾಷ್ಟçಕವಿ ಕುವೆಂಪುರವರ 115ನೇ ಜನ್ಮದಿನಾಚರಣೆಯ ಪ್ರಯುಕ್ತ ಜ.2ರಂದು ಬೆಳಿಗ್ಗೆ 9.3೦ಕ್ಕೆ ರಾಮನಗರದ ಕೆ.ಎಸ್.ಆರ್.ಟಿ. ಬಸ್ ನಿಲ್ಧಾಣದ ಹಿಂಭಾಗದ ನಾರಾಯಣ ಆಸ್ಪತ್ರೆಯಲ್ಲಿ ರಕ್ತಧಾನ ಶಿಬಿರವನ್ನು ಏರ್ಪಡಿಸಲಾಗಿದೆ.

ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಕಾಂತರಾಜ್‌ಪಟೇಲ್ ಶಿಬಿರವನ್ನು ಉದ್ಘಾಟಿಸಲಿದ್ದಾರೆ. ನಾರಾಯಣ ಆಸ್ಪತ್ರೆಯ ಡಾ. ಮಧುಸೂದನ್ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷರಾದ ಬಿ.ಟಿ. ನಾಗೇಶ್ ಅವರು ಪ್ರಾಸ್ತಾವಿಕವಾಗಿ ಮಾತನಾಡುವರು.

ತಾಲೂಕು ಪಂಚಾಯತ್‌ನ ಸ್ಥಾಯಿ ಸಮಿತಿ ಅಧ್ಯಕ್ಷೆ ವರಲಕ್ಷ್ಮಿ ಪ್ರಕಾಶ್ ಅವರು ಸೇರಿದಂತೆ ಇತರೆ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

 

ಫ್ರೆಶ್ ನ್ಯೂಸ್

Latest Posts

Featured Videos