ಕೆ.ಆರ್.ಪುರ: ಬೈಕ್ಗೆ ಬಿಎಂಟಿಸಿ ಬಸ್ ಟಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿ ಸಂಚರಿಸುತ್ತಿದ್ದ ಸಾಪ್ಟ್ವೇರ್ ಉದ್ಯೋಗಿ ಸ್ಥಳದಲ್ಲೆ ಮೃತಪಟ್ಟಿದ್ದಾನೆ.
ಕೆ.ಆರ್.ಪುರ ಸಮೀಪದ ಐಟಿಪಿಎಲ್ ಮುಖ್ಯ ರಸ್ತೆಯ ಬಿ. ನಾರಾಯಣಪುರ ಬಸ್ ನಿಲ್ದಾಣದ ಬಳಿ ಈ ದುರ್ಘಟನೆ ನಡೆದಿದ್ದು, ಮೃತನು ಬೆಂಗಳೂರಿನ ಕಲ್ಯಾಣನಗರ ನಿವಾಸಿ ನೊಮಾನ್ ನೌಷಾದ್ (24) ಎಂದು ತಿಳಿದುಬಂದಿದೆ.
ಈ ಕುರಿತು ಕೆ.ಆರ್.ಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.