ಬೆಂಗಳೂರು, ಮಾ, 26, ನ್ಯೂಸ್ ಎಕ್ಸ್ ಪ್ರೆಸ್: ಬಿಎಂಟಿಸಿ ಬಸ್ ಪಲ್ಟಿಯಾಗಿ 25 ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದಿದೆ.
ಮಲ್ಲೇಶ್ವರಂನಿಂದ ರಾಜಾಜಿನಗರ ಕಡೆಗೆ ಹೋಗುವಾಗ ಫ್ಲೈಓವರ್ ಏರುವಾಗ ಬಸ್ ಪಲ್ಟಿ ಹೊಡೆದಿದೆ ಎನ್ನಲಾಗಿದೆ. ಸ್ಥಳಕ್ಕೆ ಧಾವಿಸಿರುವ ಮಲ್ಲೇಶ್ವರಂ ಟ್ರಾಫಿಕ್ ಪೊಲೀಸರು ಪ್ರಯಾಣಿಕರ ರಕ್ಷಣಾ ಕಾರ್ಯ ಮಾಡುತ್ತಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
29 ಮಾರ್ಚ್ ನಾಮಪತ್ರ ಹಿಂಪಡೆಯಲು ಕೊನೆ ದಿನ ವಾಗಿದ್ದು ಅಂತಿಮವಾಗಿ ಎಷ್ಟು ಮಂದಿ ಕಣದಲ್ಲಿ ಉಳಿಯಲಿದ್ದಾರೆ ಎಂದು ತಿಳಿಯಲಿದೆ.