ವಿಜಯಪುರ : ಶಿರಬೂರ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ತಾಲೂಕಿನ ಜೈನಾಪುರ, ದೇವರ ಗೆಣ್ಣೂರ ಗ್ರಾಮಗಳಲ್ಲಿ ಚಿರತೆ ಕಾಣಿಸಿಕೊಂಡಾಗ ಅರಣ್ಯ ಇಲಾಖೆ ಸೆರೆ ಹಿಡಿದು ಆತಂಕ ನೀಗಿಸಿತ್ತು.
ಗ್ರಾಮದ ರೈತ ರಾಮನಗೌಡ ಪಾಟೀಲ ಅವರ ತೋಟದಲ್ಲಿ ಉಮೇಶ ಅರವತ್ತು ಎಂಬುವರು ರಾತ್ರಿ 7.30ರ ವೇಳೆಗೆ ಜೆಸಿಬಿ ಕೆಲಸ ಮಾಡುತ್ತಿದ್ದಾಗ, ಕೃಷ್ಣಾ ನದಿ ತೀರದಲ್ಲಿ ಚಿರತೆ ಓಡಾಡುತ್ತಿದ್ದುದನ್ನು ಗಮನಿಸಿದ್ದಾರೆ.