ಮೋದಿ ಸೂಚನೆ ಮೇರೆಗೆ ಹಾವೇರಿಯಿಂದ ಸ್ಪರ್ಧೆ: ಬೊಮ್ಮಾಯಿ

ಮೋದಿ ಸೂಚನೆ ಮೇರೆಗೆ ಹಾವೇರಿಯಿಂದ ಸ್ಪರ್ಧೆ: ಬೊಮ್ಮಾಯಿ

ಬೆಂಗಳೂರು: ನಾನು ಹಾವೇರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ವಿಚಾರ ಮಾಡಿರಲಿಲ್ಲ. ವರಿಷ್ಠರ ಸೂಚನೆ ಮೇರೆಗೆ ಸ್ಪರ್ಧಿಸಬೇಕಾಯಿತು. ನನ್ನ ಹೆಸರು ಪಾರ್ಲಿಮೆಂಟರಿ ಬೋರ್ಡ್ ನಲ್ಲಿ ಕೂಡಾ ಫೈನಲ್ ಆಗಿರಲಿಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಹಾವೇರಿಯಲ್ಲಿ ಮಾತನಾಡಿದ ಅವರು, “ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಬೇರೆಯವರಿಗೆ ಅವಕಾಶ ಕೊಡಿ ಎಂದಿದ್ದೆ. ಪ್ರಧಾನಿ ನರೇಂದ್ರ ಮೋದಿ, ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ, ಗೃಹ ಸಚಿವ ಅಮಿತ್ ಶಾ ಅವರು ತಿಳಿಸಿದ ಬಳಿಕ ಸ್ಪರ್ಧಿಸುವ ನಿರ್ಧಾರ ಮಾಡಬೇಕಾಯಿತು. ಅನಿವಾರ್ಯ ಇದೆ ನೀನು ಸ್ಪರ್ಧಿಸು ಎಂದು ಪ್ರಧಾನಮಂತ್ರಿ, ವರಿಷ್ಠರು ಹೇಳಿದರು. ಹೀಗಾಗಿ ನಾನು ಸ್ಪರ್ಧೆ ಮಾಡುತ್ತಿದ್ದೇನೆ” ಎಂದು ಹೇಳಿದರು.

“ಈ ಪಕ್ಷವನ್ನು ಕಟ್ಟಿ ಬೆಳೆಸಿದವರು ಈಶ್ವರಪ್ಪನವರು. ಶಿಸ್ತಿನ ಸಿಪಾಯಿ ಅವರು. ಈ ಬಗ್ಗೆ ವರಿಷ್ಠರ ಜೊತೆಗೆ ಮಾತನಾಡಿ ಮನವೊಲಿಸುತ್ತೇನೆ. ನಾನು ಸಹ ಈಗ ಈಶ್ವರಪ್ಪ ಅವರ ಜೊತೆಗೆ ಮಾತನಾಡುತ್ತೇನೆ. ಅದು ವರಿಷ್ಠರ ತೀರ್ಮಾನ. ಮೋಸ ಮಾಡಿಲ್ಲ” ಎಂದು ಬೊಮ್ಮಾಯಿ ತಿಳಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos