ಹುಬ್ಬಳ್ಳಿ: ಹುಬ್ಬಳ್ಳಿಯ ಕಾಲೇಜೊಂದರಲ್ಲಿ ಪಾಗಲ್ ಪ್ರೇಮಿ ಫಯಾಜ್ ನಿಂದ ಹತ್ಯೆಗೀಡಾದ ವಿದ್ಯಾರ್ಥಿನಿ ನೇಹಾ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಹುಬ್ಬಳ್ಳಿ ಬಿಡ್ನಾಳ್ ಬಡವಾಣೆಯಲ್ಲಿರುವ ನೇಹಾ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭೇಟಿ ನೀಡಿದರು. ಈ ವೇಳೆ ನೇಹಾ ಪೋಷಕರಿಗೆ ಬೊಮ್ಮಾಯಿಯವರು ಸಾಂತ್ವನ ಹೇಳಿ ಧೈರ್ಯ ತುಂಬಿದರು. ಬಳಿಕ ಮಾತನಾಡಿದ ಅವರು, ನೇಹಾ ಕುಟುಂಬಕ್ಕೆ ನ್ಯಾಯ ಕೊಡಿಸುತ್ತೇವೆ. ಕುಟುಂಬಸ್ಥರ ಜೊತೆ ನಾವು ನಿಲ್ಲುತ್ತೇವೆ ಎಂದು ಹೇಳಿದರು.