ಅಧಿಕಾರಕ್ಕೆ ತಂದ ರೈತರ ರಕ್ಷಣೆ ಸರ್ಕಾರದ ಕರ್ತವ್ಯ: ಬೊಮ್ಮಾಯಿ

ಅಧಿಕಾರಕ್ಕೆ ತಂದ ರೈತರ ರಕ್ಷಣೆ ಸರ್ಕಾರದ ಕರ್ತವ್ಯ: ಬೊಮ್ಮಾಯಿ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿರುವ ರೈತರಿಗೆ ಬರ ಪರಿಹಾರವೆಂದು 105 ಕೋಟಿಯನ್ನು ಬಿಡುಗಡೆ ಮಾಡಿದೆ.

ಇನ್ನು ಇದರ ಬಗ್ಗೆ ಪ್ರತಿಕ್ರಿಯೆ ನೀಡಿದ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು, ರೈತರ ಹಿತಾಸಕ್ತಿ ಕಾಪಾಡುವುದು ಮತ್ತು ಅವರ ಹಕ್ಕನ್ನು ಕೊಡಿಸುವುದರಲ್ಲಿಯೇ ನನ್ನ ರಾಜಕೀಯ ಅಸ್ತಿತ್ವ ಇದೆ ಎಂದು ನಾನು ನಂಬಿದ್ದೇನೆ‌. ಅದಕ್ಕಾಗಿ ಸದಾ ನಾನು ರೈತರ ಪರ ಧ್ವನಿ ಎತ್ತಲು ಸಿದ್ದನಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ರಾಜಕೀಯ ಅಸ್ತಿತ್ವಕ್ಕಾಗಿ ರಾಜ್ಯ ಸರ್ಕಾರದ ವಿರುದ್ದ ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದ್ದ, ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಟ್ವೀಟ್ ಮೂಲಕ ರಾಜಕೀಯವಾಗಿ ತಿರುಗೇಟು ನೀಡಿದ್ದಾರೆ.

ಮುಖ್ಯಮಂತ್ರಿಗಳೇ ತಾವು ಬಿಡುಗಡೆ ಮಾಡಿರುವ 105 ಕೋಟಿ ಎಷ್ಟು ಲಕ್ಷ ಜನ ರೈತರಿಗೆ ತಲುಪಲಿದೆ. ಅರೆಕಾಸಿನ ಮಜ್ಜಿಗೆಗೂ ಸಾಲುವುದಿಲ್ಲ. ಅಗಾಧ ಪ್ರಮಾಣದ ಬರ ಮತ್ತು ತಾವು ಬಿಡುಗಡೆ ಮಾಡಿರುವ ಹಣವನ್ನು ನೋಡಿದರೆ, ರೈತರಿಗೆ ಚಿಲ್ಲರೆ ಕಾಸಿನ ಭಿಕ್ಷೆ ಕೊಟ್ಟಂತೆ ಕಾಣುತ್ತದೆ ಎಂದು ಹೇಳಿದ್ದಾರೆ.

ಎನ್ ಡಿ ಆರ್ ಎಫ್ ಮಾರ್ಗಸೂಚಿ ಪ್ರಕಾರ ಕೇಂದ್ರ ಸರ್ಕಾರ ಬಿಡುಗಡೆ ಮಾಡುವ ಹಣದ ಬಗ್ಗೆ ನಾವೂ ಕೂಡ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇವೆ. ಆದರೆ, ನಿಮ್ಮನ್ನು ಆಯ್ಕೆ ಮಾಡಿ ಅಧಿಕಾರದ ಗದ್ದುಗೆಗೆ ಕುಂದರಿಸಿರುವ ರೈತಾಪಿ ವರ್ಗವನ್ನು ರಕ್ಷಿಸುವಂತದ್ದು ನಿಮ್ಮ ಕರ್ತವ್ಯ ನೀವು ಕೂಡಲೇ ಸಂಪೂರ್ಣವಾಗಿರುವ ಹಣವನ್ನು ಬಿಡಿಗಡೆ ಮಾಡಬೇಕೆಂದು ಆಗ್ರಹ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos