ಬಾಟಲಿಯಿಂದಲೇ ಯುವಕನ ಕೊಲೆ

ಬಾಟಲಿಯಿಂದಲೇ ಯುವಕನ ಕೊಲೆ

ಬೆಳಗಾವಿ, ಅ.1 : ಎಣ್ಣೆ ಪಾರ್ಟಿ ಮಾಡುವ ಹಿನ್ನಲೆ ಯುವಕ ಬಿಯರ್ ಕೇಳಿದಾಗ ಕೊಡಲಿಲ್ಲ ಎಂದು ಗೆಳೆಯರೇ ಆತನನ್ನು ಬಾಟಲಿಯಿಂದ ಹೊಡೆದು ಕೊಲೆ ಮಾಡಿದ ಅಮಾನುಷ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ನಗರದ ಆರ್.ಟಿ.ಒ ವೃತ್ತದ ಬಳಿ ಸಾಯಿ ಲಾಡ್ಜ್ ನಲ್ಲಿ ಈ ಘಟನೆ ನಡೆದಿದೆ. ಸಾಯಿ ಲಾಡ್ಜ್ ನಲ್ಲಿ ವೇಟರ್ ಗಳಾಗಿ ಕೆಲಸ ಮಾಡುತ್ತಿದ್ದ ಅಮಿತ್, ಶಶಿಕುಮಾರ್, ನವೀನ್ ಕೊಲೆ ಮಾಡಿದ ಆರೋಪಿಗಳು ಎಂದು ಗುರುತಿಸಲಾಗಿದೆ. ರೂಮ್ ಬಾಯ್ ವಿನಾಯಕ ಕಲಾಲ್ ಈ ಮೂವರು ಸೇರಿಕೊಂಡು ಕೊಲೆ ಮಾಡಿದ್ದಾರೆ.
ಹತ್ಯೆ ಬಳಿಕ ರಾತ್ರಿ ಪೂರ್ತಿ ಲಾಡ್ಜ್ ನಲ್ಲಿಯೇ ಆರೋಪಿಗಳು ಮಲಗಿದ್ದು, ಸೋಮವಾರ ಬೆಳಗ್ಗೆ ನಶೆ ಇಳಿದ ಮೇಲೆ ತಮ್ಮ ತಪ್ಪಿನ ಅರಿವಾಗಿ ಅಮಿತ್ ಹಾಗೂ ನವೀನ್ ಪೊಲೀಸರಿಗೆ ಶರಣಾಗಿದ್ದಾರೆ. ಆದರೆ ಶಶಿಕುಮಾರ್ ಮಾತ್ರ ಎಸ್ಕೇಪ್ ಆಗಿದ್ದಾನೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರೋ ಪೊಲೀಸರು ಶಶಿಕುಮಾರ್ನನ್ನು ಬಂಧಿಸಲು ಬಲೆ ಬೀಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos