ಚಿಕ್ಕೋಡಿ, ಆ.06: ಯುವಕನೊಬ್ಬ ಪೊಲೀಸ್ ಠಾಣೆಯ ಎದುರಲ್ಲೇ ಚಾಕುವಿನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಬೆಳಗಾವಿ ಜಿಲ್ಲೆಯ ಅಥಣಿ ಪೊಲೀಸ್ ಠಾಣೆಯ ಬಳಿ ಪೋಲಿಸರ ಎದುರಲ್ಲೇ ಯುವಕನೊಬ್ಬ ಚಾಕುವಿನಿಂದ ಕತ್ತು ಕೂಯ್ದುಕೊಂಡು ಆತ್ಮಹತ್ಯೆ ಯತ್ನವನ್ನು ನಡೆಸಿದ್ದಾನೆ. ಶಂಕರ್ ಮಾರುತಿ ಕಾಂಬಳೆ (25) ಎಂಬುವಾತ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಪೋಲಿಸರು ತಿಳಿಸಿದ್ದಾರೆ.
ಯಾವ ಕಾರಣಕ್ಕೆ ಆತ್ಮ ಹತ್ಯೆಗೆ ಯತ್ನ ಮಾಡಿಕೊಂಡಿದ್ದಾನೆ, ಆತ್ಮ ಹತ್ಯೆಗೆ ಸರಿಯಾದ ಕಾರಣ ತಿಳಿದುಬಂದಿಲ್ಲ. ಆತ್ಮ ಹತ್ಯೆಗೆ ಪ್ರಯತ್ನಿಸಿದ ಯುವಕನನ್ನು ಪೊಲೀಸರು ಅಥಣಿ ಸರ್ಕಾರಿ ಆಸ್ಪತ್ರೆ ಗೆ ದಾಖಲಿಸಲಾಗಿದ್ದು, ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಮಹಾರಾಷ್ಟ್ರದ ಮಿರಜ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.