ವಾರಣಾಸಿ, ಡಿ. 14 : ಅಗತ್ಯ ದಿನಬಳಕೆಯಲ್ಲಿ ಪ್ರಮುಖವಾದ ಈರುಳ್ಳಿ ಮತ್ತು ಬೆಳ್ಳುಳ್ಳಿ ಬೆಲೆ ಗಗನಕ್ಕೇರಿರುವುದನ್ನು ಖಂಡಿಸಿ ದೇಶದ ವಿವಿಧೆಡೆ ಪ್ರತಿಭಟನೆಗಳು ನಡೆಯುತ್ತಿರುವಾಗಲೇ ಉತ್ತರ ಪ್ರದೇಶದ ವಾರಣಾಸಿಯಲ್ಲಿ ನವ ವಧು-ವರರು ಇವುಗಳಿಂದ ತಯಾರಿಸಿದ ಹಾರಗಳನ್ನು ಪರಸ್ಪರ ವಿನಿಮಯ ಮಾಡಿಕೊಂಡು ವಿಶೇಷ ಗಮನ ಸೆಳೆದಿದ್ದಾರೆ.
ಮದುವೆ ಸಮಾರಂಭದಲ್ಲಿ ವಧು ಮತ್ತು ವರ ಈರುಳ್ಳಿ ಮತ್ತು ಬೆಳ್ಳುಳ್ಳಿಯ ವಿಶೇಷ ಹಾರವನ್ನು ಪರಸ್ಪರ ಬದಲಾಯಿಸಿಕೊಂಡು ಬೆಲೆ ಏರಿಕೆ ವಿರುದ್ಧ ವಿನೂತನ ರೀತಿಯಲ್ಲಿ ಪ್ರತಿಭಟನೆ ದಾಖಲಿಸಿದರು. ವಾರಣಾಸಿಯಲ್ಲಿ ನಡೆದ ಈ ಮದುವೆ ಇದೇ ಕಾರಣಕ್ಕಾಗಿ ವಿಶೇಷ ಗಮನ ಸೆಳೆದಿದೆ.