ಚಿಕ್ಕಮಗಳೂರು, ಅ. 14: ರಾಜ್ಯದಲ್ಲಿ ನೆನ್ನೆ ಸಂಜೆ ಸುರಿದ ಭಾರಿ ಮಳೆಯಿಂದ ಜನ ಜೀವನ ತತ್ತರಿಸಿದೆ. ಹೌದು, ಮಲೆನಾಡು ಭಾಗದಲ್ಲಿ ಭಾರೀ ಮಳೆಗೆ ಜನರು ಹೈರಾಣಾಗಿದ್ದಾರೆ. ಬೈಕ್ ಸಂಚರಿಸುವಾಗಲೇ ಸೇತುವೆ ಕುಸಿದು ಬಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರೋ ಘಟನೆ ಮೂಡಿಗೆರೆಯಲ್ಲಿ ನಡೆದಿದೆ.
ತಾಲೂಕಿನ ಮಾಲಿಂಗನಾಡು ಗ್ರಾಮದಲ್ಲಿ ಹಿರೇಬೈಲು-ಕೂವೆ ಸಂಪರ್ಕಿಸುವ ಸೇತುವೆ ಕುಸಿದಿದೆ. ಸುಮಾರು 40-50 ಅಡಿ ಆಳಕ್ಕೆ ಸೇತುವೆ ಕುಸಿದಿದ್ದು, ಅದರ ಅಡಿ ಬೈಕ್ ಸಿಲುಕಿದೆ. ಘಟನೆಯಲ್ಲಿ ಬೈಕ್ ಸವಾರ ಗಾಯಗೊಂಡಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಗಾಯಾಳುವನ್ನು ಮಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.