ಮಂಡ್ಯ, ಅ. 4 : ರಾಜ್ಯದ ಪ್ರವಾಹಪೀಡಿತ ಪ್ರದೇಶಗಳಲ್ಲಿ ಪರಿಹಾರ ಧನ ನೀಡಲು ರಾಜ್ಯದ ಬೊಕ್ಕಸದಲ್ಲಿ ಹಣವಿಲ್ಲ ಎಂಬ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಬಹುಶಃ ಪ್ರಧಾನಿ ಮೋದಿಗೆ ಸಿಎಂ ಬಿಎಸ್ ಯಡಿಯೂರಪ್ಪ ಬಗ್ಗೆ ಯಾವುದೇ ವಿಶ್ವಾಸವಿಲ್ಲ ಎನಿಸುತ್ತಿದೆ.
ಹಾಗಾಗಿಯೇ ಅವರು ರಾಜ್ಯ ಸರ್ಕಾರದ ಬಗ್ಗೆ ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ. ಮಂಡ್ಯದಲ್ಲಿ ಇಂದು ಜಿಲ್ಲೆಯ ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ಸುದ್ದಿಗೋಷ್ಠಿ ನಡೆಸಿರುವ ಹೆಚ್.ಡಿ. ಕುಮಾರಸ್ವಾಮಿ, ಉತ್ತರ ಕರ್ನಾಟಕದ ನೆರೆ ಪ್ರದೇಶಗಳ ಜನರಿಗೆ ಪರಿಹಾರ ನೀಡದ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.