ಕಾಂಗ್ರೆಸ್ನಲ್ಲಿ ದಲಿತರಿಗೆ ಅನ್ಯಾಯ: ಪರಮೇಶ್ವರ್ ಪರ ಬಿಎಸ್ವೈ ಬ್ಯಾಟಿಂಗ್

ಕಾಂಗ್ರೆಸ್ನಲ್ಲಿ ದಲಿತರಿಗೆ ಅನ್ಯಾಯ: ಪರಮೇಶ್ವರ್ ಪರ ಬಿಎಸ್ವೈ ಬ್ಯಾಟಿಂಗ್

ಹುಬ್ಬಳ್ಳಿ: ಕಾಂಗ್ರೆಸ್‍ನಲ್ಲಿ ದಲಿತರಿಗೆ ನಿರಂತರವಾಗಿ ಅನ್ಯಾಯವಾಗುತ್ತಲೇ
ಬಂದಿದೆ. ಇದನ್ನು ಅವರ ನಾಯಕರೇ ಹೇಳಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ಡಾ.ಜಿ.ಪರಮೇಶ್ವರ್‍
ಅವರ ಪರ ಬ್ಯಾಟಿಂಗ್ ಮಾಡಿದ್ದಾರೆ.

ಒಂದೇ ವಿಮಾನದಲ್ಲಿ
ಬೆಂಗಳೂರಿನಿಂದ ಹುಬ್ಬಳ್ಳಿಗೆ ಆಗಮಿಸಿದ ಬಿ.ಎಸ್.ಯಡಿಯೂರಪ್ಪ ಹಾಗೂ ಸಿದ್ದರಾಮಯ್ಯ ಬಳಿಕ ಹುಬ್ಬಳ್ಳಿಯಿಂದ
ಬೇರೆ ಬೇರೆ ಕಾರ್ಯಕ್ರಮಗಳಿಗೆ ತೆರಳಿದರು.

ಈ ಸಂದರ್ಭದಲ್ಲಿ
ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್‍ವೈ ಅವರು ದಲಿತರಿಗೆ ಅನ್ಯಾಯವಾಗಿದೆ ಎಂಬುದನ್ನು ಉಪಮುಖ್ಯಮಂತ್ರಿ
ಡಾ.ಜಿ.ಪರಮೇಶ್ವರ್ ಅವರು ಹೇಳಿದ್ದಾರೆ. ಕಾಂಗ್ರೆಸ್‍ನಲ್ಲಿ ಪ್ರತೀ ಬಾರಿಯೂ ಅನ್ಯಾಯವಾಗುತ್ತಲೇ ಇದೆ
ಎಂದು ಹೇಳಿದರು.

ಹಳೆಯ ವಿಚಾರವನ್ನು
ಡಾ.ಜಿ.ಪರಮೇಶ್ವರ್ ಅವರು ಹೇಳಿದ್ದಾರೆ ಎಂದು ಬಿಎಸ್‍ವೈ ತಿಳಿಸಿದರು. ನಿನ್ನೆ ದಾವಣಗೆರೆಯಲ್ಲಿ ಉಪಮುಖ್ಯಮಂತ್ರಿ
ಡಾ.ಜಿ.ಪರಮೇಶ್ವರ್ ಅವರು ಕಾಂಗ್ರೆಸ್‍ನಲ್ಲಿ ದಲಿತರಿಗೆ ಅನ್ಯಾಯವಾಗಿದೆ. ಬಿ.ಬಸವಲಿಂಗಪ್ಪ , ಕೆ.ಎಚ್.ರಂಗನಾಥ್,
ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮುಖ್ಯಮಂತ್ರಿಯಾಗುವ ಅವಕಾಶ ತಪ್ಪಿಹೋಯಿತು.

ನನಗೂ ಕೂಡ 3 ಬಾರಿ
ಮುಖ್ಯಮಂತ್ರಿಯಾಗುವ ಅವಕಾಶ ತಪ್ಪಿತು. ಈಗ ಬೇಕೋ ಬೇಡವೋ ಎನ್ನುವಂತೆ ಉಪಮುಖ್ಯಮಂತ್ರಿ ಸ್ಥಾನ ಕೊಟ್ಟಿದ್ದಾರೆ
ಎಂದು ಛಲವಾದಿ ಸಮಾವೇಶದಲ್ಲಿ ಹೇಳಿದ್ದರು.

ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ
ಈ ಸಂದರ್ಭದಲ್ಲಿ ಪರಮೇಶ್ವರ್ ಅವರ ಈ ಹೇಳಿಕೆ ಪ್ರತಿಪಕ್ಷಗಳಿಗೆ ಒಳ್ಳೆಯ ಅಸ್ತ್ರವಾಗಿದ್ದು, ಇದಕ್ಕೆ
ಇಂದು ಪ್ರತಿಕ್ರಿಯಿಸಿದ ಯಡಿಯೂರಪ್ಪ, ಕಾಂಗ್ರೆಸ್‍ನಲ್ಲಿ ದಲಿತರಿಗೆ ಮೊದಲಿನಿಂದಲೂ ಅನ್ಯಾಯವಾಗುತ್ತಲೇ
ಇದೆ ಎಂದು ಆರೋಪಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos