ಸುಮಲತಾ ಗೆಲುವಿಗೆ ಬಿಎಸ್ ವೈ ಹರ್ಷ!

ಸುಮಲತಾ ಗೆಲುವಿಗೆ ಬಿಎಸ್ ವೈ ಹರ್ಷ!

ಮಂಡ್ಯ, ಮೇ. 23, ನ್ಯೂಸ್ಎಕ್ಸ್ ಪ್ರೆಸ್‍:  ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಸುಮಲತಾ ಅಂಬರೀಶ್ ಗೆಲುವು ಪಡೆದುಕೊಂಡಿದ್ದಾರೆ ಎಂದು ಬಿಜೆಪಿ ನಾಯಕ ಬಿಎಸ್ ವೈ ಯಡಿಯೂರಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ.   ‘’ನಾನು ಮೂಲತಃ ಮಂಡ್ಯ ಜಿಲ್ಲೆಯವನಾಗಿದ್ದು, ಸುಮಲತಾ ಗೆಲುವಿಗೆ ಕಾರಣರಾದ ಮತದಾರರೆಲ್ಲರಿಗೂ ನಾನು ಅಭಿನಂದನೆ ಸಲ್ಲಿಸುತ್ತೇನೆ. ರಾಜ್ಯದಲ್ಲಿ ಸರ್ಕಾರ ಬದಲಾವಣೆ ವಿಚಾರವಾಗಿ ಸದ್ಯ ಯಾವುದೇ ರೀತಿ ಪ್ರತಿಕ್ರಿಯೆ ನೀಡುವುದಿಲ್ಲ.

ಮೈತ್ರಿ ಸರ್ಕಾರದಲ್ಲಿ ಸದ್ಯ ಕಿತ್ತಾಟ ಆಗುತ್ತಿದ್ದು, ಏನಾಗಲಿದೆಯೋ ಎನ್ನುವುದನ್ನು ಕಾದು ನೋಡೋಣ. ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಸಜ್ಜಾಗಿದ್ದು,  ಪಕ್ಷಕ್ಕೆ ಬಂದರೆ ಸ್ವಾಗತ ಎಂದರು.

ಫ್ರೆಶ್ ನ್ಯೂಸ್

Latest Posts

Featured Videos