ಸಿಎಂ ವಿರುದ್ದ ಬಿಎಸ್‌ವೈ ತಿರುಗೇಟು

ಸಿಎಂ ವಿರುದ್ದ ಬಿಎಸ್‌ವೈ ತಿರುಗೇಟು

ಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರ ಇಂದು ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ಮಾಡಿದರು ಇದರ ಪ್ರತಿಕವಾಗಿ ಬಿಜೆಪಿ ಶಾಸಕರು ಇಂದು ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ಮಾಡುತ್ತಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ತೀವ್ರತರವಾದ ಬರ ಇದೆ, ಎಲ್ಲಾ ತಾಲ್ಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಆ ನಿಟ್ಟಿನಲ್ಲಿ ಯಾವುದೇ ಕ್ರಮ ಆಗಿಲ್ಲ, ದೆಹಲಿಯಲ್ಲಿ ಎಲ್ಲಾ ಶಾಸಕರನ್ನು ಕರೆ ತಂದಿರೋದು ಎಷ್ಟು ಸರಿ? ಪ್ರಧಾನಿಗಳ ಜೊತೆ ಮಾತನಾಡುವುದು ಸರಿ? ಶಾಸಕರನ್ನು ಕರೆದುಕೊಂಡು ಹೋಗೋದು ದೊಂಬರಾಟ ಎಂದು ಟೀಕಿಸಿದರು.

ಯಡಿಯೂರಪ್ಪ ಪೆದ್ದು ಪೆದ್ದಾಗಿ ರಾಜಕೀಯ ಹೇಳಿಕೆ ಕೊಡ್ತಾರೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಟಾಂಗ್‌ ನೀಡಿದ ಮಾಜಿ ಸಿಎಂ, ಸಿದ್ದರಾಮಯ್ಯ ಈಗಾಗಲೇ ದೆಹಲಿಗೆ ಹೋಗಿದ್ದಾರೆ, ಹೇಳಿದ್ದನ್ನೇ ಹೇಳಿಕೊಂಡು ಕೂತಿದ್ದಾರೆ. ಅದರ ಉದ್ದೇಶ ಪ್ರಚಾರ ತೆಗೆದುಕೊಳ್ಳುವುದೇ ಹೊರತು, ಸಮಸ್ಯೆ ಬಗೆಹರಿಸುವುದಲ್ಲ. 15 ಅಥವಾ 16ನೇ ಹಣಕಾಸು ಆಯೋಗ ಇರಲಿ, ಯಾವುದೇ ವಿಚಾರದಲ್ಲಿ ಅವರೇ ಅಧಿಕಾರದಲ್ಲಿ ಇದ್ದಾಗ ಪ್ರಶ್ನೆ ಉದ್ಭವ ಆಗುತ್ತದೆ. ಕೇವಲ ಪ್ರಚಾರಕ್ಕೆ ದೆಹಲಿಗೆ ಹೋಗಿದ್ದಾರೆ, ಇದರಿಂದ ಯಾವುದೇ ಲಾಭ ಇಲ್ಲ, ಪಕ್ಷಕ್ಕೂ, ಜನರಿಗೂ ಹಾನಿಯಾಗುತ್ತದೆ‌ ಎಂದು ತಿರುಗೇಟು ನೀಡಿದರು.

ಫ್ರೆಶ್ ನ್ಯೂಸ್

Latest Posts

Featured Videos